Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಸದುರ್ಗ | ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ, ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತಿಗೆ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 31 : ಹೊಸದುರ್ಗ ತಾಲ್ಲೂಕು ಮಾಡದಕೆರೆ ಹೋಬಳಿ ಸಣ್ಣಕಿಟ್ಟದಹಳ್ಳಿ ಗ್ರಾಮದ 75 ವರ್ಷದ ವೃದ್ದ ಓಬಣ್ಣನಿಗೆ ಕಳೆದ ತಿಂಗಳು ಏಳನೆ ತಾರೀಖಿನಂದು ಕಾರು ಡಿಕ್ಕಿ ಹೊಡೆಸಿದ ಇದೇ ಗ್ರಾಮದ ತಿಪ್ಪೇಸ್ವಾಮಿ ಎಂಬುವನನ್ನು ಇದುವರೆವಿಗೂ ಬಂಧಿಸದೆ ಕರ್ತವ್ಯ ಲೋಪವೆಸಗಿರುವ ಹೊಸದುರ್ಗ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಮೇಶ್ ಕೆ.ಟಿ. ಇವರನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆ ನವ ಪ್ರಜಾ ರಕ್ಷಣಾ ವೇದಿಕೆಯಿಂದ ಒನಕೆ ಓಬವ್ವ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಬಡಾವಣೆ ಠಾಣೆ ಸಬ್‍ಇನ್ಸ್‍ಪೆಕ್ಟರ್‍ಗೆ ಮನವಿ ಸಲ್ಲಿಸಲಾಯಿತು.

ಆ.7 ರಂದು ರಾತ್ರಿ 8-30 ರ ಸಮಯದಲ್ಲಿ ಓಬಣ್ಣ ಹೊಲದಿಂದ ಮನೆಗೆ ಹೋಗುತ್ತಿದಾಗ ತಿಪ್ಪೇಸ್ವಾಮಿ ಕಾರನ್ನು ವೇಗವಾಗಿ ಚಲಾಯಿಸಿ ಡಿಕ್ಕಿ ಹೊಡೆಸಿದ್ದಲ್ಲದೆ ಅಮಾನವೀಯವಾಗಿ ವರ್ತಿಸಿದ್ದಾನೆ. ಇಸ್ಪಿಟ್ ದಂಧೆ ನಡೆಸುತ್ತಿರುವ ಈತ ರಾಜಾರೋಷವಾಗಿ ಸುತ್ತಾಡಿಕೊಂಡಿದ್ದರು ಹೊಸದುರ್ಗ ಠಾಣೆ ಪೊಲೀಸರು ಬಂಧಿಸಿಲ್ಲವೇಕೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ಓಬಣ್ಣನ ಕುಟುಂಬದವರು ಹಲವಾರು ಬಾರಿ ಹೊಸದುರ್ಗ ಪೊಲೀಸರನ್ನು ವಿಚಾರಿಸಿದರು ಉಡಾಫೆ ಉತ್ತರ ಕೊಡುತ್ತಿದ್ದಾರೆ. ಕೂಡಲೆ ತಿಪ್ಪೇಸ್ವಾಮಿಯನ್ನು ಬಂಧಿಸಿ ವೃತ್ತ ನಿರೀಕ್ಷಕ ರಮೇಶ್ ಕೆ.ಟಿ.ಇವರನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆ ಒತ್ತಾಯಿಸಿದರು.

ನವ ಪ್ರಜಾ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಹೆಚ್.ಏಕಾಂತಪ್ಪ, ಭ್ರಷ್ಠಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ, ಹೆಚ್.ಶಿವಮೂರ್ತಿ
ಜಯರಾಮ್, ಅಜ್ಜಪ್ಪ, ವಿಶ್ವನಾರಾಯಣಮೂರ್ತಿ, ಓ.ಕರಿಬಸಪ್ಪ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now