ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿತ್ತು. ಹೀಗಾಗಿ ಚಳಿಗಾಲವೂ ಜಾಸ್ತಿ ಎಂದೇ ನಂಬಲಾಗಿತ್ತು. ಕೆರೆ ಕಟ್ಟೆಗಳೆಲ್ಲ ತುಂಬಿ ತುಳುಕುತ್ತಿದ್ದ ಕಾರಣಕ್ಕೆ ಚಳಿ ಜಾಸ್ತಿಯಾಗಲಿದೆ ಎಂದು ಭಾವಿಸಲಾಗಿತ್ತು. ಹಾಗೇ ಬೇಸಿಗೆಯೂ ತಡವಾಗಬಹುದು ಎಂದು ಊಹಿಸಲಾಗಿತ್ತು. ಮಾರ್ಚ್ ವೇಳೆಗೆ ಬೇಸಿಗೆ ಶುರುವಾಗುವ ಲಕ್ಷಣಗಳಿವೆ ಎನ್ನಲಾಗಿತ್ತು. ಆದರೆ ಇದೀಗ ಮಾರ್ಚ್ ಗಿಂತ ಮೊದಲೇ ಬೇಸಿಗೆಯ ಬಿಸಿ ಜೋರಾಗಿ ಶುರುವಾಗಿದೆ. ಶಿವರಾತ್ರಿ ಬಂದ ಬಳಿಕ ಶಿವ ಶಿವ ಅಂತ ಚಳಿ ಹೋಗುತ್ತದೆ ಎಂಬ ಮಾತಿದೆ. ಆದರೆ ಈಗಲೇ ಚಳಿ ಮಾಯಾವಾಗಿದೆ.
ಇಂದು ಬೆಂಗಳೂರಿನಲ್ಲಿ ಗರಿಷ್ಠ 31.9 ಡಿಗ್ರಿ ತಾಪಮಾನ ದಾಖಲಾಗಿದೆ. ಕನಿಷ್ಠ ತಾಪಮಾನ 28 ರಿಂದ 29 ಸೆಲ್ಸಿಯಸ್ ದಾಖಲಾಗಿದೆ. ತಮಿಳುನಾಡಿನಿಂದ ಪೂರ್ವ ಮಾರುತಗಳು ಬೀಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗುತ್ತಿದೆ. ಫೆಬ್ರವರಿ 5 ಬುಧವಾರದ ನಂತರ ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ. ಈ ತಿಂಗಳಲ್ಲಿಯೇ ಬಿಸಿಲು ಹೀಗಿದೆ ಎಂದರೆ ಮಾರ್ಚ್ ನಲ್ಲಿ ನಗರದ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.
ಹಲವು ಜಿಲ್ಲೆಗಳಲ್ಲಿ ಇದೇ ತಿಂಗಳಲ್ಲಿ 32 ರಿಂದ 37 ಡಿಗ್ರಿವರೆಗೆ ತಾಪಮಾನ ದಾಖಲು ಆಗುತ್ತಿದೆ. ಬೇಸಿಗೆಯ ಬಿಸಿಲಿನ ತೀವ್ರತೆಯನ್ನು ಎದುರಿಸಲು ರಾಜ್ಯದ ಜನತೆ ಸಿದ್ಧವಾಗಬೇಕಿದೆ. ಹವಮಾನ ಇಲಾಖೆ ಕೂಡ ಈ ಸಂಬಂಧ ಎಚ್ಚರಿಕೆಯನ್ನು ನೀಡಿದೆ. ಬೇಸಿಗೆಯಲ್ಲಿ ಮಕ್ಕಳನ್ನು ಇನ್ನು ಕಾಳಜಿಯಿಂದ ನೋಡಿಕೊಳ್ಳಬೇಕಿದೆ. ಬಿಸಿಲಿನಲ್ಲಿ ಡಿಹೈಡ್ರೇಷನ್ ಆಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಮಕ್ಕಳಿಗೆ ನೀರಿನ ಅಂಶ ಹೆಚ್ಚಾಗಿ ದೇಹ ಸೇರುವಂತೆ ನೋಡಿಕೊಳ್ಳಿ. ಹೊರಗೆ ಹೋಗುವಾಗ ಕೊಡೆಯೂ ಜೊತೆಗೆ ಇರಲಿ.
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 05 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ…
ಪ್ರಯಾಗ್ ರಾಜ್ : ಈಗಾಗಲೇ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಕೋಟ್ಯಾಂತರ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ. ಇದೀಗ…
ಬೆಂಗಳೂರು: ಬಿಜೆಪಿಯಲ್ಲಿ ಮೊದಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯುದ್ಧ ಶುರುವಾಗಿದೆ. ಯತ್ನಾಳ್ ಬಣ ಪಣತೊಟ್ಟು ನಿಂತಿದ್ದು, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನ…
ಬಳ್ಳಾರಿ: ಜಿಲ್ಲಾಸ್ಪತ್ರೆಯ ವೈದ್ಯ ಡಾ.ಸುನೀಲ್ ಕಿಡ್ನ್ಯಾಪ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಒಂದು ಸಿಕ್ಕಿದೆ. ಜನವರಿ 25 ರಂದು ವಾಕಿಂಗ್ ಮಾಡುವಾಗ…
ಸುದ್ದಿಒನ್ : ವೈಜ್ಞಾನಿಕ ಸಂಶೋಧನೆಯ ಪ್ರಕಾರ, ಹಾಲಿನ ಉತ್ಪನ್ನಗಳು ಟೈಪ್ 2 ಮಧುಮೇಹಕ್ಕೆ ತಡೆಗಟ್ಟುವ ಕ್ರಮವಾಗಿ ಕಾರ್ಯನಿರ್ವಹಿಸುತ್ತವೆ. ಹಾಲಿನ ಉತ್ಪನ್ನಗಳಲ್ಲಿನ…
ಈ ರಾಶಿಯವರ ಅದೃಷ್ಟ ಕೈಹಿಡಿಯಲಿದೆ, ಭೂಮಿ ಮನೆ ಅಂಗಡಿ ವಾಹನ ಖರೀದಿಸಲು ಯೋಚಿಸುತ್ತಿದ್ದೀರಿ, ಬುಧವಾರದ ರಾಶಿ ಭವಿಷ್ಯ 05 ಫೆಬ್ರವರಿ…