ಮೈಸೂರು: ಸಿಎಂ ಸಿದ್ದರಾಮಯ್ಯ ಹೊಸ ಮನೆಯ ಗೃಹ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಮಾಧ್ಯಮದವರನ್ನ ಗೃಹ ಪ್ರವೇಶಕ್ಕೆ ಕರೆಯುವುದಿಲ್ಲ ಎಂಬ ಮಾತನ್ನ ಹೇಳಿದ್ದಾರೆ. ಹೊಸ ಮನೆ ಬಗ್ಗೆ ಏನೆಲ್ಲಾ ಹೇಳಿದ್ರು ಎಂಬ ಮಾಹಿತಿ ಇಲ್ಲಿದೆ ನೋಡಿ.
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ಡಿಸೆಂಬರ್ ನಲ್ಲಿ ಹೊಸ ಮನೆ ಗೃಹ ಪ್ರವೇಶವಿದೆ. ಯಾರನ್ನೂ ಗೃಹ ಪ್ರವೇಶಕ್ಕೆ ಆಹ್ವಾನಿಸುವುದಿಲ್ಲ. ಮಾಧ್ಯಮದವರನ್ನು ಆಹ್ವಾನಿಸುವುದಿಲ್ಲ. ನೀವೂ ಬಂದರೂ ಬೇಡ ಎಂದು ಕಳುಹಿಸುತ್ತೇನೆ. ಮನೆಯ ಕೆಲಸ ಬಹುತೇಕ ಸಂಪೂರ್ಣವಾಗಿದೆ. ಬರೀ ಕುಟುಂಬಸ್ಥರಷ್ಟೇ ಸೇರಿ ಗೃಹಪ್ರವೇಶ ಮಾಡಿಕೊಳ್ಳುತ್ತೇವೆ. ನಾನು ಈಗ ಇರುವ ಮನೆ ನನ್ನದಲ್ಲ, ಮರಿಸ್ವಾಮಿ ಅವರದ್ದು. ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ. ಗೃಹ ಪ್ರವೇಶ ಆದ ಮೇಲೆ ಹೊಸ ಮನೆಗೆ ಹೋಗುತ್ತೇವೆ. ಈ ಮನೆಯನ್ನು ಮರಿಸ್ವಾಮಿ ಖಾಲಿ ಇಟ್ಟರೆ ಜನರನ್ನು ಭೇಟಿ ಮಾಡಲು ಬಳಸಿಕೊಳ್ಳುತ್ತೇವೆ. ಇಷ್ಟು ದಿನ ಅನ್ನದಾತನಾಗಿದ್ದರು ಎಂದು ಹೇಳಿದ್ದಾರೆ.
ಇದೆ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಮಾತಿಗೆ ತಿರುಗೇಟು ನೀಡಿದ್ದು, ಪ್ರತಿ ನಿತ್ಯ ಆರ್ ಎಸ್ ಎಸ್ ಬರೆದುಕೊಡುವುದನ್ನಿ ಹೇಳುವ ಅಶೋಕನಿಗೆ ರಾಜ್ಯದ ಸಮಸ್ಯೆ ಏನು ಗೊತ್ತು. ಆರ್ ಎಸ್ ಎಸ್ ಏನು ಬರೆದುಕೊಡುತ್ತದೆಯೋ ಅದನ್ನೇ ಅಶೋಕ ಹೇಳುತ್ತಾನೆ. ಅವನಿಗೆ ರೈತನ ಸಮಸ್ಯೆ, ನಾಡಿನ ಸಮಸ್ಯೆ ಏನು ಗೊತ್ತು? ಸುಮ್ನೆ ವಿಪಕ್ಷ ನಾಯಕನನ್ನಾಗಿ ಮಾಡಿದ್ದಾರೆ, ಆಗಿದ್ದಾನೆ ಅಷ್ಟೇ ಎಂದು ಆರ್ ಅಶೋಕ್ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಗಿ ಮಾತನಾಡಿದ್ದಾರೆ.
