Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಮಲಲ್ಲಾ ಮೂರ್ತಿಯ ಕೆತ್ತನೆ ಹೇಗಾಯ್ತು..? ಶಿಲ್ಪಿಯ ಆಯ್ಕೆ ಹೇಗಿತ್ತು..? ಮಾಹಿತಿ ಬಿಚ್ಚಿಟ್ಟರು ಪೇಜಾವರಶ್ರೀ

---Advertisement---

 

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗಾಗಿ ಇಡೀ ದೇಶದ ಜನ ಕಾಯುತ್ತಿದ್ದಾರೆ. ಅಯೋಧ್ಯೆಯಂತೂ ಮಧುವಣಗಿತ್ತಿಯಂತೆ ಅಲಂಕಾರಗೊಂಡಿದೆ. ಇನ್ನು ಕೇವಲ ಮೂರು ದಿನಗಳು ಮಾತ್ರ ಈ ಅದ್ಭುತವನ್ನು ಕಣ್ತುಂಬಿಕೊಳ್ಳಲು ಸಮಯ ಬಂದೇ ಬಿಡುತ್ತದೆ. ರಾಮಲಲ್ಲಾ ಮೂರ್ತಿಯ ಕೆತ್ತನೆ ಆಗಿದ್ದು ನಮ್ಮ ರಾಜ್ಯದಿಂದ. ಅದು ಹೇಗಾಯ್ತು..? ಶಿಲ್ಪಿಯ ಆಯ್ಕೆ ಹೇಗಾಯ್ತು..? ಶಿಲೆಗೆ ಏನೆಲ್ಲಾ ಹೇಳಿದ್ದರು ಈ ಎಲ್ಲಾ ಪ್ರಶ್ನೆಗಳು ಕಾಡದೆ ಇರುವುದಿಲ್ಲ. ಅದಕ್ಕೆಲ್ಲ ಪೇಜಾವರ ಶ್ರೀಗಳೇ ಉತ್ತರ ನೀಡಿದ್ದಾರೆ.

ಖಾಸಗಿ ಚಾನೆಲ್ ಒಂದಕ್ಕೆ ಮಾತನಾಡಿರುವ ಪೇಜಾವರ ಶ್ರೀಗಳು, ರಾಮ ಮಂದಿರಕ್ಕಾಗಿ ಪ್ರತಿಮೆ ನಿರ್ಮಾಣ ಮಾಡಬೇಕು ಎಂದಾಗ, ಮೂರು ಪ್ರತಿಮೆಗಳ ನಿರ್ಮಾಣವಾಗಲಿ ಎಂದರು. ಯಾಕಂದ್ರೆ ಕಡೆ ಗಳಿಗೆಯಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಯಾವುದೇ ಸಮಸ್ಯೆ ಎದುರಾಗಬಾರದು ಎಂದು. ಬಳಿಕ ಯಾರ ಕೈಯಿಂದ ಮೂರ್ತಿ ಕೆತ್ತನೆ ಮಾಡಿಸುವುದು ಎಂಬ ಚರ್ಚೆ ಶುರುವಾದಾಗ, ಪ್ರಸಿದ್ಧ ಪಡೆದ ಎಲ್ಲಾ ಕಲಾವಿದರನ್ನು ಕರೆಸಲಾಗಿತ್ತು. ಅನುಭವ, ಕೆಲಸ ಹಂಚಿಕೊಳ್ಳಲು ಹೇಳಲಾಗಿತ್ತು. ಅದರಲ್ಲಿ ಮೂರು ಮಂದಿಯನ್ನು ಆಯ್ಕೆ ಮಾಡಲಾಗಿತ್ತು. ಆ ಮೂವರಲ್ಲಿ ಇಬ್ಬರು ಕರ್ನಾಟಕದವರೇ. ಮೂರ್ತಿ ಆಯ್ಕೆಯಾಗಿದ್ದು ಕೂಡ ಕರ್ನಾಟಕದ್ದೇ ಎಂಬುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

ಸೆಲೆಕ್ಷನ್ ಕಮಿಟಿಯಲ್ಲೂ ಕರ್ನಾಟಕದಿಂದ ಪೇಜಾವರ ಶ್ರೀಗಳು ಮಾತ್ರ ಇದ್ದರಂತೆ. ಇನ್ನುಳಿದಂತೆ ಅಯೋಧ್ಯೆವರೇ ಇದ್ದರು. ಅದೃಷ್ಟವೆಂಬಂತೆ ಕರ್ನಾಟಕದ ಶಿಲೆಯೇ ಆಯ್ಕೆಯಾಗಿದ್ದು, ಆ ಶಿಲೆಗೆ ಬಳಸಿದ ಕಲ್ಲು ಸಹ ಕರ್ನಾಟಕದ್ದೆ ಆಗಿದೆ. ಇನ್ನುಳಿದ ಮೂರ್ತಿಗಳಿಗೂ ಮುಂದೆ ಯೋಗ್ಯವಾದ ಸ್ಥಳದಲ್ಲಿ ಪೂಜೆ ಸಲ್ಲಿಸಲಾಗುತ್ತದೆಯಂತೆ. ಜನವರಿ 22ಕ್ಕೆ ಕರ್ನಾಕಟದ ಶಿಲ್ಪಿ ಕೆತ್ತಿದ ರಾಮನ ಶಿಲೆ ಅನಾವರಣಗೊಳ್ಳಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...