ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೇಲೆ ಎಲ್ಲರ ಚಿತ್ತ ಇದೆ. ಈ ಬಾರಿ ಮೂವರು ಸ್ಪರ್ಧೆ ಮಾಡಿ, ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಕೆರಳಿಸಿದ. ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ, ಬಿಜೆಪಿಯಿಂದ ಬಂಡಾಯವೆದ್ದು ಕೆ. ಎಸ್.ಈಶ್ವರಪ್ಪ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ಮಾಡಿದ್ದಾರೆ. ಇವತ್ತು ಎಲ್ಲರಿಗೂ ಒಂಥರ ಟೆನ್ಶನ್ ಶುರುವಾಗಿದೆ.
ಗೀತಾ ಶಿವರಾಜ್ಕುಮಾರ್ ಈ ಬಾರಿ ಗೆದ್ದೇ ಗೆಲ್ಲುತ್ತಾರೆ ಎಂಬ ಆತ್ಮವಿಶ್ವಾಸವನ್ನಿಟ್ಟುಕೊಂಡು ಇಡೀ ಚಿತ್ರರಂಗದ ನಿರ್ಮಾಪಕರೆಲ್ಲರೂ ಬೆಂಬಲ ನೀಡಿದ್ದರು. ಇಂದು ಮತ ಎಣಿಕೆ ಆರಂಭವಾಗಿದ್ದು, ಆರಂಭದಲ್ಲಿಯೇ ಗೀತಾ ಶಿವರಾಜ್ ಕುಮಾರ್ ಅವರಿಗೆ ಹಿನ್ನಡೆಯಾಗಿದೆ.
ಇನ್ನು ಕೆ.ಎಸ್.ಈಶ್ವರಪ್ಪ ಅವರು ಕೂಡ ಈ ಬಾರಿ ಟಿಕೆಟ್ ಸಿಗದೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆದರೆ ಆರಂಭದ ಎಣಿಕೆ ಸಂದರ್ಭದಲ್ಲಿಯೇ ಈಶ್ವರಪ್ಪ ಅವರಿಗೂ ಹಿನ್ನಡೆಯಾಗಿದೆ. ಬಿವೈ ರಾಘವೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






