Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುವನಿಧಿ ಕಾರ್ಯಕ್ರಮ ಎಷ್ಟು ಜೋರಾಗಿ ನಡೆಯಲಿದೆ : ಸಚಿವ ಮಧು ಬಂಗಾರಪ್ಪ ನೀಡಿದ ಮಾಹಿತಿ ಇಲ್ಲಿದೆ

---Advertisement---

 

ಶಿವಮೊಗ್ಗ: ಯುವನಿಧಿ ಕಾರ್ಯಕ್ರಮಕ್ಕೆ ನಮ್ಮ ಜಿಲ್ಲೆಯಲ್ಲಿಯೇ ಚಾಲನೆ ಕೊಡುವುದು ನಮಗೆ ಹೆಮ್ಮೆಯ ವಿಚಾರ. ನಾನು ಬಹಳ ಖುಷಿಯಿಂದಾನೇ ಕೇಳಿದೆ. ಸಿಎಂ ಕೂಡ ಥಟ್ ಅಂತ ಓಕೆ ಅಂದು ಬಿಟ್ಟರು. ಏನೇ ಕಾರ್ಯಕ್ರಮವಾದರೂ ಬಡವರ ಪರ ಮಾಡಿದಾಗ ಬಹಳ ಸಂತಸವಾಗುತ್ತದೆ. ಅದೊಂದು ಹೆಮ್ಮೆ. ಗೃಹಜ್ಯೋತಿ, ಗೃಹಲಕ್ಷ್ಮೀ ಸೇರಿದಂತೆ ಐದು ಯೋಜನೆಗಳು ಬಡವರಿಗೆ ಉಪಯೋಗವಾಗುತ್ತಿದೆ. ಈಗ ಎರಡು ಕೋಟಿ ಹೆಣ್ಣು ಮಕ್ಕಳು ಓಡಾಡುತ್ತಾರೆ ಎಂದಿದ್ದಾರೆ.

ಯುವಕರಿಗೆ ನಾನು ಈ ಮನವಿ ಮಾಡಯತ್ತೇನೆ. ದಯವಿಟ್ಟು ಧೈರ್ಯವಾಗಿರಿ. ನಾನು ಕಷ್ಟಪಟ್ಟು ಓದುತ್ತೇನೆ. ಆದರೆ ಕೆಲಸ ಸಿಗಲಿಲ್ಲ. ಅಪ್ಪನ ಜೇಬು ನೋಡಬೇಕು, ಮನೆ ಜವಬ್ದಾರಿ ಅಂತೆಲ್ಲಾ ಯೋಚಿಸುವ ಯುವಕರಿಗೆ ಸಿದ್ದರಾಮಯ್ಯ ಅವರು, ಯುವನಿಧಿ ಯೋಜನೆ ತಂದಿದ್ದಾರೆ. ಆ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡುವುದು ಒಳ್ಳೆಯ ನಿರ್ಧಾರ. ಯಾಕಂದ್ರೆ ಇದು ಹೋರಾಗಾರರ ಜಿಲ್ಲೆ.

ಮೊದಲು 50-60 ಸಾವಿರ ಜನ ಸೇರಿಸಿ ಮಾಡೋಣಾ ಅಂತ ಇತ್ತು. ಆದರೆ ನಾನು ಹೇಳಿದೆ ತುಂಬಾ ಜನರನ್ನು ಸೇರಿಸಿ ಮಾಡೋಣಾ. ಇಡೀ ರಾಜ್ಯದಿಂದ ಯುವಕರು ಬರಲಿ, ಅವರಿಗೆ ಒಂದು ಸಂದೇಶ ಹೋಗಲಿ. ದೊಡ್ಡ ಮಟ್ಟದಲ್ಲಿ ಹೋಗುವುದರಿಂದ ಯೋಜನೆಗೆ ಸಾರ್ಥಕತೆ ಸಿಗಲಿದೆ. ಮಾಹಿತಿ ಪ್ರಕಾರ 25 ಸಾವಿರ ನೊಂದಣಿಯಾಗಿದೆ ಅಂದರೆ ಇನ್ನು ಜಾಸ್ತಿಯಾಗಬೇಕು. ಅದಕ್ಕೊಂದು ವ್ಯವಸ್ಥೆಯಾಗಬೇಕು. ಯುವಕರಿಗೋಸ್ಕರ ಈ ಕಾರ್ಯಕ್ರಮಕ್ಕೆ ಬಂದು ಹೋಗೊ. ನೀವೂ ಮತ ಹಾಕಿದ್ದೀರಿ. ಅದರ ಸಹಕಾರ ಸಿಗಬೇಕು ಎಂದರೆ ಎಲ್ಲರೂ ಕಾರ್ಯಕ್ರಮಕ್ಕೆ ಬನ್ನಿ.

ವಿವೇಕಾನಂದ ಅವರ ಜಯಂತಿಯ ದಿನ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಯುವಕರಿಗೆ ಆ ಜಯಂತಿಯ ದಿನ ಬಹಳ ಒಳ್ಳೆಯದು. ಕಾರ್ಯಕ್ರಮ ತುಂಬಾ ಚೆನ್ನಾಗಿ ಆಗಲಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment