ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿರುವ ಕಾರಣ ಕರ್ನಾಟಕ ರಾಜ್ಯದಲ್ಲೂ ಮಳೆಯ ಪ್ರಭಾವ ಜೋರಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯಿಂದ ಆಗಸ್ಟ್ 19ರವರೆಗೂ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಂತು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಮನೆ ಮಾಡಿದೆ. ಮಧ್ಯಾಹ್ನದಿಂದಲೂ ಜೋರು ಮಳೆಯಾಗುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಮಳೆಯಿಂದಾಗಿ ಸಂಪರ್ಕಕ್ಕೆ ಸಮಸ್ಯೆಯಾಗಿದೆ. ದ್ವಿಚಕ್ರ ವಾಹನ ಸವಾರರಿಗಂತು ಇನ್ನಿಲ್ಲದ ತೊಂದರೆಯಾಗಿತ್ತು. ಮಳೆ ನಿಲ್ಲುವ ತನಲ ಅವರು ನಿಂತುಕೊಂಡೆ ಮುಂದೆ ಸಾಗಿದ್ದಾರೆ.
ಉಳಿದಂತೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಿಗೆ ಆ.15 ರಿಂದ 19ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ ತಿಂಗಳಲ್ಲಿ ಶೇಕಡ 50ರಷ್ಟು ಮಳೆ ಮಾತ್ರ ಆಗಲಿದೆ ಎಂದಹ ಹವಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ರೈತರು ಸಹಜವಾಗಿಯೇ ಆತಂಕಕ್ಕೀಡಾಗಿದ್ದಾರೆ. ಈ ಸಮಯದಲ್ಲಿಯೇ ಒಂದಷ್ಟು ಬೆಳೆಗಳನ್ನ ಬೆಳೆಯಲಾಗುತ್ತದೆ. ಆದರೆ ಈ ಸಮಯದಲ್ಲಿ ಮಳೆ ಕೈಕೊಟ್ಟರೆ ಬೆಳೆಯ ಕಥೆ ಏನು ಎಂಬ ಚಿಂತೆಯಾಗಿದೆ. ಸದ್ಯಕ್ಕೆ ಎಲ್ಲಾ ಕಡೆ ಮಳೆಯಾಗುತ್ತಿದೆ. ನೆಮ್ಮದಿಯಾಗಿದ್ದಾರೆ. ಜೊತೆಗೆ ರಾಜ್ಯದ ಸಾಕಷ್ಟಹ ಜಲಾಶಯದಲ್ಲಿ ನೀರು ಶೇಖರಣೆಯಾಗಿದೆ.














