Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಇತ್ಯರ್ಥವಾದ ಒಟ್ಟು ಪ್ರಕರಣಗಳೆಷ್ಟು ? ಇಲ್ಲಿದೆ ಮಾಹಿತಿ…!

---Advertisement---

ಸುದ್ದಿಒನ್, ಚಿತ್ರದುರ್ಗ. ಡಿ.15:  ಜಿಲ್ಲೆಯಲ್ಲಿ ಕಳೆದ ಡಿಸೆಂಬರ್ 9ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ ಒಟ್ಟು 3204 ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ 1,06,421 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥದ ಒಟ್ಟು ಮೊತ್ತ 17,36,39,597 ರೂ. ಆಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಗೀತಾ ತಿಳಿಸಿದ್ದಾರೆ.  

ಈ ಬಾರಿ ನಡೆದ ಲೋಕ್ ಅದಾಲತ್‍ನಲ್ಲಿ ವಿಶೇಷವಾಗಿ 41 ಪಾಲು ವಿಭಾಗದ ಪ್ರಕರಣಗಳು, 80 ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, 200 ಚೆಕ್ ಬೌನ್ಸ್ ಪ್ರಕರಣ, 42 ಅಪರಾಧಿಕ ಕಾಂಪೌಂಡ್ ಪ್ರಕರಣಗಳು, 76 ಅಪಘಾತ ವಿಮಾ ಪ್ರಕರಣಗಳು, 14 ಕೌಟುಂಬಿಕ ಪ್ರಕರಣಗಳು, 144 ಅಮಲ್ ಜಾರಿ ಪ್ರಕರಣಗಳು, ಕರಾರಿಗೆ ಸಂಬಂಧಿಸಿದ 10 ದಾವೆಗಳು, ವಿವಿಧ ರೀತಿಯ 94 ಸಿವಿಲ್ ದಾವೆಗಳು, ಅಪರಾಧಿಕ ಕಾಂಪೌಂಡಬಲ್ ಪ್ರಕರಣಗಳು (ವಿವಿಧ ಅಪರಾಧಿಕ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳು) ಇತರೆ ಅಪರಾಧಿಕ ಕಾಯ್ದೆಗಳ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿವೆ.

ಅಲ್ಲದೇ, ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಒಟ್ಟು 9 ದಂಪತಿಗಳು, ಅಂದರೆ ಹಿರಿಯೂರು ನ್ಯಾಯಾಲಯದಲ್ಲಿ ಮೂರು ದಂಪತಿಗಳು, ಮೊಳಕಾಲ್ಮೂರು ನ್ಯಾಯಾಲಯದಲ್ಲಿ ಇಬ್ಬರು ಹಾಗೂ ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ ನ್ಯಾಯಾಲಯದಲ್ಲಿ ತಲಾ ಒಂದು ದಂಪತಿ ತಮ್ಮ ವೈಮನಸ್ಸು ಬಿಟ್ಟು ಮತ್ತೆ ಒಂದಾಗಿದ್ದಾರೆ.

ವಿಶೇಷವಾಗಿ ಸುಮಾರು 374 ಸಿವಿಲ್ ದಾವೆಗಳು ರಾಜಿಯಾಗಿರುತ್ತದೆ. ಅಲ್ಲದೇ 200 ಚೆಕ್ ಅಮಾನ್ಯ ಪ್ರಕರಣಗಳು ರಾಜಿಯಾಗಿದ್ದು,  ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಒಟ್ಟಾರೆ ಮೊತ್ತ ರೂ 17,36,39,597/- ಆಗಿರುತ್ತದೆ.

ಮುಂಬರುವ ಲೋಕ್ ಅದಾಲತ್‍ನಲ್ಲಿ ಇನ್ನೂ ಹೆಚ್ಚು ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಗೀತಾ ಸಾರ್ವಜನಿಕರಿಗೆ ವಿನಂತಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment