Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿದ್ದರಾಮಯ್ಯ ಅವರು ಎಷ್ಟು ವರ್ಷ ಸಿಎಂ ಸ್ಥಾನದಲ್ಲಿ ಇರುತ್ತಾರೆ ? ಸತೀಶ್ ಜಾರಕಿಹೊಳಿ ಹೇಳಿದ್ದೇನು..?

---Advertisement---

 

 

ಮೈಸೂರು: ಮೂಡಾ ಹಗರಣ ತನಿಖೆಗೆ ಬಂದಾಗಿನಿಂದ ಸಿಎಂ ರಾಜೀನಾಮೆ ನೀಡಲಿ ಎಂದೇ ವಿಪಕ್ಷ ನಾಯಕರು ಪಟ್ಟು ಹಿಡಿದಿದ್ದರು. ಈಗ ವಿಪಕ್ಷದವರು ಸುಮ್ಮನಾಗಿದ್ದಾರೆ. ಆದರೆ ಪಕ್ಷದೊಳಗೆ ಸಿದ್ದರಾಮಯ್ಯ ಅವರ ರಾಜೀನಾಮೆ, ಸಿಎಂ ಬದಲಾವಣೆಯ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಐದು ವರ್ಷ ಇರುತ್ತಾರೋ ಮೂರು ವರ್ಷ ಇರುತ್ತಾರೋ ಗೊತ್ತಿಲ್ಲ. ಆದರೆ ಸದ್ಯಕ್ಕೆ ಸಿಎಂ ಸ್ಥಾನ ಬದಲಾವಣೆಯ ಪ್ರಶ್ನೆ ಉದ್ಭವಿಸಿಲ್ಲ. ಸಿದ್ದರಾಮಯ್ಯ ಅವೆಉ ಎಷ್ಟು ವರ್ಷ ಸಿಎಂ ಆಗಿರುತ್ತಾರೆ ಎಂಬುದನ್ನು ಹೈಕಮಾಂಡ್ ಗೆ ಕೇಳಬೇಕು. ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳಾಗಿದ್ದು, ಅದರ ಬದಲಾವಣೆಯ ಚರ್ಚೆ ನಡೆದಿಲ್ಲ. ಪ್ರತಿಪಕ್ಷಗಳು, ಮಾಧ್ಯಮಗಳಷ್ಟೇ ಈ ಬಗ್ಗೆ ಸುದ್ದಿ ಮಾಡುತ್ತಿವೆ.

ಕಳೆದ ಐದು ವರ್ಷದಿಂದ ಎಲ್ಲರೂ ಸಿಎಂ ಆಗಬೇಕು ಅಂತಿದ್ದಾರೆ. ಸಿಎಂ ಆಗಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ. ನನ್ನ ಮಗಳು ಆಸೆ ಪಡುವುದರಲ್ಲಿ ತಪ್ಪೇನಿದೆ. ಸದ್ಯಕ್ಕೆ ಸಿಎಂ‌ ಇದ್ದಾರೆ. ಸಿಎಂ ಬದಲಾವಣೆಯ ಚರ್ಚೆ ಸದ್ಯಕ್ಕೆ ನಮ್ಮ ಪಕ್ಷದಲ್ಲಿ ನಡೆದಿಲ್ಲ. ಅದನ್ನು ಸಾಕಷ್ಟು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದಿದ್ದಾರೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಸಿಎಂ ಸ್ಥಾನಕ್ಕಾಗಿ ಸತೀಶ್ ಜಾರಕಿಹೊಳಿ ಅವರು ಓಡಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಅದಕ್ಕೆ ತೆರೆ ಎಳೆದಿದ್ದಾರೆ. ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು ಕೂಡ ಚರ್ಚೆ ಹುಟ್ಟು ಹಾಕಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...