Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸಿಎಂ ಡಿಕೆಶಿ ಪ್ರಮಾಣ ಮಾಡಿದ ತುಮಕೂರಿನ ಅಜ್ಜಯ್ಯನ ಬಗ್ಗೆ ನಿಮಗೆಷ್ಟು ಗೊತ್ತು..?

---Advertisement---

ಇಂದು ಸಿಎಂ ಆಗಿ ಸಿದ್ದರಾಮಯ್ಯ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅವರ ಜೊತೆಗೆ ಸಚಿವರಾಗಿಯೂ ಎಂಟು ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಒಬ್ಬೊಬ್ಬರು ಒಂದೊಂದು ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಜ್ಜಯ್ಯನ ಹಿನ್ನೆಲೆ ಇಲ್ಲಿದೆ.

ಡಿಕೆ ಶಿವಕುಮಾರ್ ಅವರಿಗೆ ಗಂಗಾಧರ ಅಜ್ಜಯ್ಯ ಎಂದರೆ ಗೌರವ, ಭಕ್ತಿ ಜಾಸ್ತಿ. ಕಷ್ಟವಾದರೂ, ಖುಷಿಯಾದರೂ ಅಜ್ಜಯ್ಯನ ಸನ್ನಿಧಾನಕ್ಕೆ ಭೇಟಿ ನೀಡುತ್ತಾ ಇರುತ್ತಾರೆ. ಈ ಸಲ ಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದಲ್ಲೂ ಅಜ್ಜಯ್ಯನ ಮಠದಿಂದ ಮಾರ್ಗದರ್ಶನ ಪಡೆದಿದ್ದರ ಬಗ್ಗೆ ಇತ್ತಿಚೆಗೆ ಹಂಚಿಕೊಂಡಿದ್ದರು.

ಇನ್ನು ಸರ್ಕಾರ ಬಹುಮತದೊಂದಿಗೆ ರಚನೆಯಾಗಿದ್ದು, ಪ್ರಮಾಣವನ್ನು ಅಜ್ಜಯ್ಯನ ಹೆಸರಿನಲ್ಲಿಯೇ ಸ್ವೀಕಾರ ಮಾಡಿದ್ದಾರೆ. ಅಜ್ಜಯ್ಯನ ಮಠ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕರೆಯಲ್ಲಿ ಇದೆ. ಸುಮಾರು 800 ವರ್ಷಗಳ ಇತಿಹಾಸವಿದೆಯಂತೆ. ಹಿಂದೆ ಕಾಡಸಿದ್ದೇಶ್ವರರು ನಂದಿಯ ಮೇಲೆ ಸಂಚಾರಗೈಯುತ್ತಾ ಬಂದು, ನೊಣವಿನಕೆರೆಯ ದಕ್ಷಿಣ ಭಾಗದಲ್ಲಿರುವ ಕಾಡಿನಲ್ಲಿ ನೆಲೆಸಿದರಂತೆ.

ಒಮ್ಮೆ ಕಾಡಸಿದ್ದೇಶ್ವರರು ತಪ್ಪಿಸ್ಸಿಗೆ ಕುಳಿತಿದ್ದಾಗ ಮುದಿಯಪ್ಪ ನಾಯಕ ಎಂಬ ಅರಸ ಬೇಟೆಯಾಡಲು ಬಂದು, ಇವರನ್ನು ಪ್ರಾಣಿ ಎಂದು ಭಾವಿಸಿ ಬಾಣ ಬಿಟ್ಟರಂತೆ. ಆದರೆ ಅವರಿಗೆ ಬಾಣತಾಗಿದರೂ ಏನೂ ಆಗಲಿಲ್ಲವಂತೆ. ಬಳಿಕ ಕಾಡಸಿದ್ದೇಶ್ವರರನ್ನು ನೋಡಿ ತಪ್ಪಿನ ಅರಿವಾಗಿ, ಮುದಿಯಪ್ಪ ನಾಯಕ ಕಣ್ಣೀರಿಟ್ಟನಂತೆ. ಕೊನೆಗೆ ಆತನನ್ನು ಕ್ಷಮಿಸಿದ ಕಾಡಸಿದ್ದೇಶ್ವರರು, ಅನುಗ್ರಹಿಸಿದರಂತೆ. ಹೀಗೆ ಹಿನ್ನೆಲೆ ಇರುವ ಈ ಮಠಕ್ಕೆ ಡಿಕೆ ಶಿವಕುಮಾರ್ ಅವರು ಭಕ್ತಿಯಿಂದ ನಡೆದುಕೊಳ್ಳುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...