Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸಿಎಂ ಡಿಕೆಶಿ ಪ್ರಮಾಣ ಮಾಡಿದ ತುಮಕೂರಿನ ಅಜ್ಜಯ್ಯನ ಬಗ್ಗೆ ನಿಮಗೆಷ್ಟು ಗೊತ್ತು..?

Facebook
Twitter
Telegram
WhatsApp

ಇಂದು ಸಿಎಂ ಆಗಿ ಸಿದ್ದರಾಮಯ್ಯ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅವರ ಜೊತೆಗೆ ಸಚಿವರಾಗಿಯೂ ಎಂಟು ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಒಬ್ಬೊಬ್ಬರು ಒಂದೊಂದು ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಜ್ಜಯ್ಯನ ಹಿನ್ನೆಲೆ ಇಲ್ಲಿದೆ.

ಡಿಕೆ ಶಿವಕುಮಾರ್ ಅವರಿಗೆ ಗಂಗಾಧರ ಅಜ್ಜಯ್ಯ ಎಂದರೆ ಗೌರವ, ಭಕ್ತಿ ಜಾಸ್ತಿ. ಕಷ್ಟವಾದರೂ, ಖುಷಿಯಾದರೂ ಅಜ್ಜಯ್ಯನ ಸನ್ನಿಧಾನಕ್ಕೆ ಭೇಟಿ ನೀಡುತ್ತಾ ಇರುತ್ತಾರೆ. ಈ ಸಲ ಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದಲ್ಲೂ ಅಜ್ಜಯ್ಯನ ಮಠದಿಂದ ಮಾರ್ಗದರ್ಶನ ಪಡೆದಿದ್ದರ ಬಗ್ಗೆ ಇತ್ತಿಚೆಗೆ ಹಂಚಿಕೊಂಡಿದ್ದರು.

ಇನ್ನು ಸರ್ಕಾರ ಬಹುಮತದೊಂದಿಗೆ ರಚನೆಯಾಗಿದ್ದು, ಪ್ರಮಾಣವನ್ನು ಅಜ್ಜಯ್ಯನ ಹೆಸರಿನಲ್ಲಿಯೇ ಸ್ವೀಕಾರ ಮಾಡಿದ್ದಾರೆ. ಅಜ್ಜಯ್ಯನ ಮಠ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕರೆಯಲ್ಲಿ ಇದೆ. ಸುಮಾರು 800 ವರ್ಷಗಳ ಇತಿಹಾಸವಿದೆಯಂತೆ. ಹಿಂದೆ ಕಾಡಸಿದ್ದೇಶ್ವರರು ನಂದಿಯ ಮೇಲೆ ಸಂಚಾರಗೈಯುತ್ತಾ ಬಂದು, ನೊಣವಿನಕೆರೆಯ ದಕ್ಷಿಣ ಭಾಗದಲ್ಲಿರುವ ಕಾಡಿನಲ್ಲಿ ನೆಲೆಸಿದರಂತೆ.

ಒಮ್ಮೆ ಕಾಡಸಿದ್ದೇಶ್ವರರು ತಪ್ಪಿಸ್ಸಿಗೆ ಕುಳಿತಿದ್ದಾಗ ಮುದಿಯಪ್ಪ ನಾಯಕ ಎಂಬ ಅರಸ ಬೇಟೆಯಾಡಲು ಬಂದು, ಇವರನ್ನು ಪ್ರಾಣಿ ಎಂದು ಭಾವಿಸಿ ಬಾಣ ಬಿಟ್ಟರಂತೆ. ಆದರೆ ಅವರಿಗೆ ಬಾಣತಾಗಿದರೂ ಏನೂ ಆಗಲಿಲ್ಲವಂತೆ. ಬಳಿಕ ಕಾಡಸಿದ್ದೇಶ್ವರರನ್ನು ನೋಡಿ ತಪ್ಪಿನ ಅರಿವಾಗಿ, ಮುದಿಯಪ್ಪ ನಾಯಕ ಕಣ್ಣೀರಿಟ್ಟನಂತೆ. ಕೊನೆಗೆ ಆತನನ್ನು ಕ್ಷಮಿಸಿದ ಕಾಡಸಿದ್ದೇಶ್ವರರು, ಅನುಗ್ರಹಿಸಿದರಂತೆ. ಹೀಗೆ ಹಿನ್ನೆಲೆ ಇರುವ ಈ ಮಠಕ್ಕೆ ಡಿಕೆ ಶಿವಕುಮಾರ್ ಅವರು ಭಕ್ತಿಯಿಂದ ನಡೆದುಕೊಳ್ಳುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!