Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಉಳಿದ ಆನೆಗಳ ಬಗ್ಗೆ ನಿಮಗೆಷ್ಟು ಗೊತ್ತು..?

---Advertisement---

ಮೈಸೂರು: ಇಂದು ವಿಶ್ವ ವಿಖ್ಯಾತ ದಸರಾ ಕಾರ್ಯಕ್ರಮ ಬಹಳ ಅದ್ದೂರಿಯಿಂದ ಜರುಗುತ್ತಿದೆ. ಈ ಬಾರಿ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಅಭಿಮನ್ಯು ಹೊರಲಿದ್ದಾನೆ. ಅಭಿಮನ್ಯುಗೆ ಈಗ 58 ವರ್ಷ. ಅಭಿಮನ್ಯು ಜೊತೆಗೆ ಇತರೆ ಆನೆಗಳು ಕೂಡ ಹೆಜ್ಜೆ ಹಾಕಲಿವೆ. ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಅಭಿಮನ್ಯು ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದರೆ, ಅದರ ಹಿಂದೆ ಸಾಲಾಗಿ ಉಳಿದ ಆನೆಗಳು ಮಧುಮಕ್ಕಳಂತೆ ನಡೆಯುತ್ತವೆ‌.

 

ದಸರಾದಲ್ಲಿ ಒಟ್ಟು 14 ಆನೆಗಳು ದಸರಾದಲ್ಲಿ ಪಾಲ್ಗೊಳ್ಳಲಿಬೆ. ಆದರೆ 9 ಆನೆಗಳು ಮಾತ್ರ ಅಭಿಮನ್ಯು ಜೊತೆಗೆ ಸಾಥ್ ನೀಡಲಿವೆ. ಅದರಲ್ಲಿ ಅಭಿಮನ್ಯು ನೇತೃತ್ವ ವಹಿಸಲಿದ್ದು, ಲಕ್ಷ್ಮೀ, ಗೋಪೊ, ವರಲಕ್ಷ್ಮೀ, ಪ್ರಶಾಂತ, ಧನಂಜಯ, ಸುಗ್ರೀವ, ಭೀಮ, ದೊಡ್ಡ ಹರವೆ ಲಕ್ಷ್ಮೀ, ಕಂಜನ್, ಹಿರಣ್ಯ, ರೋಹಿತ, ಮಹೇಂದ್ರ ಹಾಗೂ ಏಕಲವ್ಯ ಹೆಜ್ಜೆ ಹಾಕಲಿದ್ದಾರೆ. ಈ ಏಕಲವ್ಯ ಹೊಸದಾಗಿ ಸೇರಿರುವ ಆನೆಯಾಗಿದೆ.

ಅಭಿಮನ್ಯು: ಆನೆಯನ್ನು 1970ರಲ್ಲಿ ಕೊಡಗು ಜಿಲ್ಲೆಯ ಹೆಬ್ಬಳ್ಳ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿತ್ತು. 2012ರಿಂದ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದೆ. ಈ ಬಾತಿಯೂ ಅಂಬಾರಿ ಹೊರಲು ಅಭಿಮನ್ಯು ಸಿದ್ಧನಾಗಿದ್ದಾನೆ.

ಧನಂಜಯ: 2013ರಲ್ಲಿ ಹಾಸನ ಜಿಲ್ಲೆಯ ಯಳಸೂರು ವಲಯದಲ್ಲಿ ಸೆರೆ ಹಿಡಿಯಲಾಗಿತ್ತು. ಕಾಡಾನೆ ಮತ್ತು ಹುಲಿಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಧನಂಜಯ ಪಾಲ್ಗೊಳ್ಳುತ್ತಾ ಬಂದಿದ್ದಾನೆ. ಧನಂಜಯನಿಗೆ ಈಗ 44 ವರ್ಷ ವಯಸ್ಸು.

ಭೀಮ: 2009ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದ ಹೆತ್ತೂರಿನಲ್ಲಿ ಸೆರೆಹಿಡಿಯಲಾಗಿತ್ತು. ಭೀಮನಿಗೆ ಈಗಿನ್ನು 24ರ ಹರಯ. ಆದರೆ ಅಂಬಾರಿ ಹೊರುವ ಎಲ್ಲಾ ಲಕ್ಷಣಗಳನ್ನು ಹೊಂದಿದ್ದಾನೆ.

ಮಹೇಂದ್ರ: ಇವನಿಗೆ ಈಗ 41 ವರ್ಷ. ದಸರಾ ಅಂಬಾರಿ ಹೊರುವ ಎಲ್ಲಾ ಲಕ್ಷಣಗಳನ್ನು ಹೊಂದಿದ್ದಾನೆ. 2022ರ ಶ್ರೀರಂಗಪಟ್ಟಣದ ದಸರಾದಲ್ಲೂ ಭಾಗಿಯಾಗಿದ್ದ.

ಗೋಪಿ: 1990ರಲ್ಲಿ ಹಾಸನದ ದುಬಾರೆ ಬೆಟ್ಟದಲ್ಲಿ ಸೆರೆಹಿಡಿಯಲಾಯ್ತು. ಈಗ ಅವನಿಗೆ 42 ವರ್ಷ. 2015ರಲ್ಲಿ ಪಟ್ಟದ ಆನೆಯಾಗಿ ಅರಮನೆ ಪ್ರವೇಶ ಮಾಡಿದ್ದ.

ಕಂಜನ್: ದಿಬಾರೆ ಶಿಬಿರದಲ್ಲಿ ಬೆಳೆಯುತ್ತಿದ್ದಾನೆ. ಈಗ ಇವನಿಗೆ 25 ವರ್ಷ. ಕಳೆದ ಬಾರಿ ಮೊದಲ ಬಾರಿಗೆ ದಸರಾದಲ್ಲಿ ಭಾಗಿಯಾಗಿದ್ದ.

ಲಕ್ಷ್ಮೀ: ಈಗ ಲಕ್ಷ್ಮೀಗೆ 53 ವರ್ಷ. ಅನೇಕ ಬಾರಿ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಳೆ.

ರೋಹಿತ್ ಗೆ 22 ವರ್ಷ, ಹಿರಣ್ಯಾಗೆ 47, ಪ್ರಶಾಂತಗೆ 5 ವರ್ಷ, ಸುಗ್ರೀವಗೆ 42 ವರ್ಷ, ವರಲಕ್ಷ್ಮೀಗೆ 68 ವರ್ಷ, ಏಕಲವ್ಯಗೆ 39 ವರ್ಷ ಆಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...