ಕೋಡಿ ಬಿದ್ದಿದ್ದ ವಾಣಿ ವಿಲಾಸ ಸಾಗರದಲ್ಲಿ ಈಗ ನೀರು ಎಷ್ಟಿದೆ..?

1 Min Read

ಬೇಸಿಗೆ ಬಿಸಿ ಈ ಬಾರಿ ಬೇಗನೇ ಶುರುವಾಗಿದೆ. ಫೆಬ್ರವರಿಗೇನೆ ರಣರಣ ಬಿಸಿಲು ಚುರುಗುಡ್ತಾ ಇತ್ತು. ಈಗಂತೂ ಆರಂಭದಲ್ಲಿಯೇ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಈ ವರ್ಷ ಮಳೆ ಕೂಡ ಉತ್ತಮವಾಗಿಯೇ ಆಗಿದೆ. ಎಲ್ಲೆಡೆ ಸುರಿದ ಮಳೆಗೆ ಕೆರೆ ಕಟ್ಟೆಗಳು ತುಂಬಿ ತುಳುಕುವುದಲ್ಲದೆ ಜಲಾಶಯಗಳು ಕೋಡಿ ಬಿದ್ದಿವೆ. ಇದರಿಂದ ರೈತ ಕೊಂಚ ಸಮಾಧಾನಗೊಂಡಿದ್ದಾನೆ. ಈ ವರ್ಷದ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗಲ್ಲ ಎಂಬ ಸಂತಸ ಇದೆ. ಹಾಗಾದ್ರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸದ್ಯದ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ನೋಡೋಣಾ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಾಣಿ ವಿಲಾಸ ಸಾಗರ ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಸದ್ಯ ಗರಿಷ್ಠ ನೀರಿನ ಮಟ್ಟ 2140 ಅಡಿ : 30.42 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಹಾಗೇ ಇಂದಿನ ನೀರಿನ ಮಟ್ಟ 2138.35 ಅಡಿ ನೀರು ಇದೆ. ಅಂದ್ರೆ 29.04 ಟಿಎಂಸಿ ನೀರಿದೆ. ಒಳಹರಿವು ಇಲ್ಲ, ಹೊರ ಹರಿವು 715 ಕ್ಯೂಸೆಕ್ ಆಗಿದೆ.

ಹಾಗೇ ಮಲಪ್ರಭಾ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 2059.74 ಅಡಿ, 16.39 ಟಿಎಂಸಿ ನೀರು ಇದೆ. ತುಂಗಾ ಭದ್ರಾ ಜಲಾಸಯದಲ್ಲಿ ಇಂದಿನ ನೀರಿನ ಮಟ್ಟ, 1606.52 ಅಡಿ / 31.22 ಟಿಎಂಸಿ ಇದೆ. ಭದ್ರಾ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟವನ್ನು ನೋಡೋದಾದ್ರೆ, 2139.79 ಅಡಿ / 50.57 ಟಿಎಂಸಿ ಇದೆ. ರಾಜ್ಯದಲ್ಲಿ ಇನ್ನು ಹಲವು ಪ್ರಮುಖ ಜಲಾಶಯಗಳಲ್ಲೂ ನೀರು ತುಂಬಿದ್ದು, ಬೇಸಿಗೆಯಲ್ಲಿ ಉಪಯೋಗಕ್ಕೆ ಬರುವ ಸಂತಸ ರೈತರಲ್ಲಿದೆ.

Share This Article
Leave a Comment

Leave a Reply

Your email address will not be published. Required fields are marked *