ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸ್ಪಂದನಾ ಮೃತದೇಹ ಬ್ಯಾಂಕಾಕ್ ನಿಂದ ನಿನ್ನೆ ರಾತ್ರಿಯೇ ಬಂದಿದೆ. ಮಧ್ಯರಾತ್ರಿಯಿಂದಾನೇ ಮಲ್ಲೇಶ್ವರಂನಲ್ಲಿರುವ ತಂದೆ ಬಿಕೆ ಶಿವರಾಮ್ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಹಿರಿಯ ನಟ, ನಟಿಯರು, ರಾಜಕೀಯ ನಾಯಕರು, ಆಪ್ತರು, ಸಂಬಂಧಿಕರು, ಅಭಿಮಾನಿಗಳೆಲ್ಲಾ ಸ್ಪಂದನಾ ಅಂತಿಮ ದರ್ಶನ ಪಡೆದಿದ್ದಾರೆ. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.
ಈ ವೇಳೆ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ರಾಘು, ಅಪ್ಪು ಎಲ್ಲಾ ನಮ್ಮ ಮನೆಯಲ್ಲಿಯೇ ಬೆಳೆದವರು. ಚಿಕ್ಕವರೇ ಬೇಗ ಹೋಗಿಬಿಡುತ್ತಾರೆ. ಇಂಥ ಸಮಯದಲ್ಲಿ ಏನು ಹೇಳಬೇಕು ಗೊತ್ತಾಗಲ್ಲ. ಮಗಳು ಇನ್ನಿಲ್ಲ ಅಂಥ ತಂದೆಗೆ ಹೇಳೋದಾ, ಹೆಂಡತಿ ಇನ್ನಿಲ್ಲ ಅಂತ ರಾಘುಗೆ ಸಮಾಧಾನ ಮಾಡುವುದು ಎಂದು ತಿಳಿತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.
ಇನ್ನು ಗಿರಿಜಾ ಲೋಕೇಶ್ ಮಾತನಾಡಿ, ಸ್ಪಂದನಾ ಮುಖದಲ್ಲಿ ಒಂದಿಷ್ಟು ಕಳೆಮಾಸಿಲ್ಲ. ಇನ್ನು ಬದುಕಿದ್ದಾಳೆ ಅಂತಾನೆ ಅನ್ನಿಸುತ್ತೆ. ದೇವರು ಅದೆಷ್ಟು ಕ್ರೂರಿ. ಒಂದು ಸುಂದರ ಸಂಸಾರವನ್ನು ಹಾಳು ಮಾಡಿಬಿಟ್ಟ ಎಂದು ನೋವು ಮಾಡಿಕೊಂಡಿದ್ದಾರೆ.
ಹಿರಿಯ ನಟ ಶ್ರೀನಾಥ್ ಮಾತನಾಡಿ, ಆ ಮಗು ಆತ್ಮಕ್ಕೆ ಶಾಂತಿ ಸಿಗಲಿ. ನಮ್ಮ ರಾಘುಗೆ ದುಃಖ ತಡೆದುಕೊಳ್ಳುವ ಶಕ್ತಿ ಆ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್