Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಪಂದನಾ ಇನ್ನಿಲ್ಲ ಅಂತ ರಾಘುಗೆ ಸಮಾಧಾನ ಮಾಡೋದು ಹೇಗೆ..? : ರಾಘಣ್ಣ ಕಣ್ಣೀರು

Facebook
Twitter
Telegram
WhatsApp

 

ಬೆಂಗಳೂರು: ಸ್ಪಂದನಾ ಮೃತದೇಹ ಬ್ಯಾಂಕಾಕ್ ನಿಂದ ನಿನ್ನೆ ರಾತ್ರಿಯೇ ಬಂದಿದೆ. ಮಧ್ಯರಾತ್ರಿಯಿಂದಾನೇ ಮಲ್ಲೇಶ್ವರಂನಲ್ಲಿರುವ ತಂದೆ ಬಿಕೆ ಶಿವರಾಮ್ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಹಿರಿಯ ನಟ, ನಟಿಯರು, ರಾಜಕೀಯ ನಾಯಕರು, ಆಪ್ತರು, ಸಂಬಂಧಿಕರು, ಅಭಿಮಾನಿಗಳೆಲ್ಲಾ ಸ್ಪಂದನಾ ಅಂತಿಮ ದರ್ಶನ ಪಡೆದಿದ್ದಾರೆ. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಈ ವೇಳೆ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ರಾಘು, ಅಪ್ಪು ಎಲ್ಲಾ ನಮ್ಮ‌ ಮನೆಯಲ್ಲಿಯೇ ಬೆಳೆದವರು. ಚಿಕ್ಕವರೇ ಬೇಗ ಹೋಗಿಬಿಡುತ್ತಾರೆ. ಇಂಥ ಸಮಯದಲ್ಲಿ ಏನು ಹೇಳಬೇಕು ಗೊತ್ತಾಗಲ್ಲ. ಮಗಳು ಇನ್ನಿಲ್ಲ ಅಂಥ ತಂದೆಗೆ ಹೇಳೋದಾ, ಹೆಂಡತಿ ಇನ್ನಿಲ್ಲ ಅಂತ ರಾಘುಗೆ ಸಮಾಧಾನ ಮಾಡುವುದು ಎಂದು ತಿಳಿತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಇನ್ನು ಗಿರಿಜಾ ಲೋಕೇಶ್ ಮಾತನಾಡಿ, ಸ್ಪಂದನಾ ಮುಖದಲ್ಲಿ ಒಂದಿಷ್ಟು ಕಳೆ‌ಮಾಸಿಲ್ಲ. ಇನ್ನು ಬದುಕಿದ್ದಾಳೆ ಅಂತಾನೆ ಅನ್ನಿಸುತ್ತೆ. ದೇವರು ಅದೆಷ್ಟು ಕ್ರೂರಿ. ಒಂದು ಸುಂದರ ಸಂಸಾರವನ್ನು ಹಾಳು ಮಾಡಿಬಿಟ್ಟ ಎಂದು ನೋವು ಮಾಡಿಕೊಂಡಿದ್ದಾರೆ.

 

ಹಿರಿಯ ನಟ ಶ್ರೀನಾಥ್ ಮಾತನಾಡಿ, ಆ ಮಗು ಆತ್ಮಕ್ಕೆ ಶಾಂತಿ ಸಿಗಲಿ. ನಮ್ಮ ರಾಘುಗೆ ದುಃಖ ತಡೆದುಕೊಳ್ಳುವ ಶಕ್ತಿ ಆ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

ಪೆನ್ ಡ್ರೈವ್ ಲೀಕ್ ಮಾಡಿದ್ದು ಪ್ರಜ್ವಲ್ ರೇವಣ್ಣ ಕಾರು ಡ್ರೈವರ್..? ದೇವರಾಜೇಗೌಡ ಹೇಳಿದ್ದೇನು..?

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಈಗಾಗಲೇ ಸಾಕಷ್ಟು ಜನರ ಕೈಗೆ ಸಿಕ್ಕಿದೆ. ಮೂರು ಸಾವಿರಕ್ಕೂ ಹೆಚ್ಚು ವಿಡಿಯೋಗಳು ಇವೆ ಎನ್ನಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ

error: Content is protected !!