Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆ, ಚಳಿಯಲ್ಲೂ ಟೀ ಶರ್ಟ್ ಧರಿಸಿ ಹೇಗಿದ್ದರು..? : ರಿವಿಲ್ ಆಯ್ತು ರಾಹುಲ್ ಗಾಂಧಿ ಸತ್ಯ ಸಂಗತಿ..!

Facebook
Twitter
Telegram
WhatsApp

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಈ ಯಾತ್ರೆಯಲ್ಲಿ ಸಿಕ್ಕಾಪಟ್ಟೆ ಹೈಲೇಟ್ ಆಗಿದ್ದು ಎಂದರೆ ಅದು ಅವರು ತೊಟ್ಟಿದ್ದ ಟೀ ಶರ್ಟ್. ಎಷ್ಟು ರಾಜ್ಯಕ್ಕೆ ತೆರಳಿದರು ಬಿಳಿ ಬಣ್ಣದ ಟೀ ಶರ್ಟ್ ಮಾತ್ರ ಧರಿಸಿದ್ದರು. ಮಳೆ, ಗಾಳಿ, ಚಳಿ ಏನೇ ಇದ್ದರು, ಅದಕ್ಕೂ ಜಗ್ಗಲಿಲ್ಲ. ಟೀ ಶರ್ಟ್ ಒಂದರಲ್ಲಿಯೇ ಯಾತ್ರೆ ಮುಂದುವರೆಸಿದ್ದಾರೆ.

ಈ ಬಗ್ಗೆ ಹಲವರು ಅನುಮಾನ ಕೂಡ ವ್ಯಕ್ತಪಡಿಸಿದ್ದಾರೆ. ಇದೆಲ್ಲ ಹೇಗೆ ಸಾಧ್ಯ..? ಎಂದು ಉತ್ತರ ಪ್ರದೇಶದ ಆರೋಗ್ಯ ಸಚಿವರು ಈ ಬಗ್ಗೆ ಒಮ್ಮೆ, ಅನುಮಾನವನ್ನು ವ್ಯಕ್ತಪಡಿಸಿದ್ದರು. ಗಡಗಡ ನಡುಗುವ ಚಳಿಯಲ್ಲಿ ಜನರು ಪ್ರಾಣವನ್ನೆ ಬಿಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಮಾತ್ರ ಇಷ್ಟೊಂದು ಆರೋಗ್ಯವಾಗಿದ್ದಾರೆ. ಅವರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಇದೆಯಾ ಎಂಬುದನ್ನು ಟೆಸ್ಟ್ ಮಾಡಬೇಕು ಎಂಬುದಾಗಿ ಹೇಳಿದ್ದರು. ಇನ್ನು ಹಲವರು ಥರ್ಮಕೋಲ್ ಬಳಸುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

ಇದೀಗ ಇದಕ್ಕೆಲ್ಲಾ ಸ್ವತಃ ರಾಹುಲ್ ಗಾಂಧಿಯವರೇ ಉತ್ತರ ನೀಡಿದ್ದಾರೆ. ಕನ್ಯಾಕುಮಾರಿ, ಕೇರಳದಲ್ಲಿ ಯಾತ್ರೆ ಶುರುವಾದಾಗ ಬಿಸಿಲಿನ ವಾತಾವರಣವಿತ್ತು. ಮಧ್ಯಪ್ರದೇಶಕ್ಕೆ ಬರುವಷ್ಟರಲ್ಲಿ ಸ್ವಲ್ಪ ಚಳಿ ಆರಂಭವಾಗಿತ್ತು. ಒಂದು ದಿನ ಮೂರು ಬಡ ಹೆಣ್ಣು ಮಕ್ಕಳಯ ಬಂದು ಮತನಾಡಿಸಿದರು. ಅವರ ಕೈ ನಡುಗುತ್ತಾ ಇತ್ತು. ಚಳಿಗೆ ಆ ರೀತಿ ಆಗಿತ್ತು. ಆಗ ನಾನು ಯೋಚನೆ ಮಾಡಿದೆ, ಆ ಬಡ ಹೆಣ್ಣು ಮಕ್ಕಳಿಗೆ ಚಳಿಯಾದಂತೆ ರಾಹುಲ್ ಗಾಂಧಿಗೂ ಚಳಿಯಾಗುತ್ತಿರುತ್ತೆ ಎಂಬ ಸಂದೇಶ ಕೊಡಲು ಹೊರಟೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿ ಅಧಿವೇಶನದಲ್ಲಿ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ತರಲು ಚಳ್ಳಕೆರೆ ತಾಲೂಕು ವಕೀಲರ ಸಂಘದ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಗುಲ್ಬರ್ಗ ಜಿಲ್ಲೆಯ ಉದ್ದೂರು ತಾಲೂಕಿನ ವಕೀಲರಾದ ಈರಣ್ಣಗೌಡಮಾಳಿ ಪಾಟೀಲ್ ರವರ ಮೇಲೆ ಯಾವುದೇ

ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳಸಬೇಕು : ಜಿಲ್ಲಾಧಿಕಾರಿ ದಿವ್ಯಪ್ರಭು

ಚಿತ್ರದುರ್ಗ.ಡಿ.08: ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರಶ್ನೆ ಮಾಡುವ ಮನೋಭಾವವನ್ನು ಬೆಳಸಬೇಕು, ಆಗ ಮಾತ್ರ ವಿದ್ಯಾರ್ಥಿಗಳು ಮುಂದೆ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ

ಚಳ್ಳಕೆರೆಯಲ್ಲಿ ಹೃದಯ ವಿದ್ರಾವಕ ಘಟನೆ | ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ನೇಣಿಗೆ ಶರಣಾದ ತಾಯಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಇಬ್ಬರು ಮಕ್ಕಳನ್ನು ಪಾತ್ರ ನೀರಿನಲ್ಲಿ ಮುಳುಗಿಸಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ

error: Content is protected !!