Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆ, ಚಳಿಯಲ್ಲೂ ಟೀ ಶರ್ಟ್ ಧರಿಸಿ ಹೇಗಿದ್ದರು..? : ರಿವಿಲ್ ಆಯ್ತು ರಾಹುಲ್ ಗಾಂಧಿ ಸತ್ಯ ಸಂಗತಿ..!

Facebook
Twitter
Telegram
WhatsApp

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಈ ಯಾತ್ರೆಯಲ್ಲಿ ಸಿಕ್ಕಾಪಟ್ಟೆ ಹೈಲೇಟ್ ಆಗಿದ್ದು ಎಂದರೆ ಅದು ಅವರು ತೊಟ್ಟಿದ್ದ ಟೀ ಶರ್ಟ್. ಎಷ್ಟು ರಾಜ್ಯಕ್ಕೆ ತೆರಳಿದರು ಬಿಳಿ ಬಣ್ಣದ ಟೀ ಶರ್ಟ್ ಮಾತ್ರ ಧರಿಸಿದ್ದರು. ಮಳೆ, ಗಾಳಿ, ಚಳಿ ಏನೇ ಇದ್ದರು, ಅದಕ್ಕೂ ಜಗ್ಗಲಿಲ್ಲ. ಟೀ ಶರ್ಟ್ ಒಂದರಲ್ಲಿಯೇ ಯಾತ್ರೆ ಮುಂದುವರೆಸಿದ್ದಾರೆ.

ಈ ಬಗ್ಗೆ ಹಲವರು ಅನುಮಾನ ಕೂಡ ವ್ಯಕ್ತಪಡಿಸಿದ್ದಾರೆ. ಇದೆಲ್ಲ ಹೇಗೆ ಸಾಧ್ಯ..? ಎಂದು ಉತ್ತರ ಪ್ರದೇಶದ ಆರೋಗ್ಯ ಸಚಿವರು ಈ ಬಗ್ಗೆ ಒಮ್ಮೆ, ಅನುಮಾನವನ್ನು ವ್ಯಕ್ತಪಡಿಸಿದ್ದರು. ಗಡಗಡ ನಡುಗುವ ಚಳಿಯಲ್ಲಿ ಜನರು ಪ್ರಾಣವನ್ನೆ ಬಿಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಮಾತ್ರ ಇಷ್ಟೊಂದು ಆರೋಗ್ಯವಾಗಿದ್ದಾರೆ. ಅವರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಇದೆಯಾ ಎಂಬುದನ್ನು ಟೆಸ್ಟ್ ಮಾಡಬೇಕು ಎಂಬುದಾಗಿ ಹೇಳಿದ್ದರು. ಇನ್ನು ಹಲವರು ಥರ್ಮಕೋಲ್ ಬಳಸುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

ಇದೀಗ ಇದಕ್ಕೆಲ್ಲಾ ಸ್ವತಃ ರಾಹುಲ್ ಗಾಂಧಿಯವರೇ ಉತ್ತರ ನೀಡಿದ್ದಾರೆ. ಕನ್ಯಾಕುಮಾರಿ, ಕೇರಳದಲ್ಲಿ ಯಾತ್ರೆ ಶುರುವಾದಾಗ ಬಿಸಿಲಿನ ವಾತಾವರಣವಿತ್ತು. ಮಧ್ಯಪ್ರದೇಶಕ್ಕೆ ಬರುವಷ್ಟರಲ್ಲಿ ಸ್ವಲ್ಪ ಚಳಿ ಆರಂಭವಾಗಿತ್ತು. ಒಂದು ದಿನ ಮೂರು ಬಡ ಹೆಣ್ಣು ಮಕ್ಕಳಯ ಬಂದು ಮತನಾಡಿಸಿದರು. ಅವರ ಕೈ ನಡುಗುತ್ತಾ ಇತ್ತು. ಚಳಿಗೆ ಆ ರೀತಿ ಆಗಿತ್ತು. ಆಗ ನಾನು ಯೋಚನೆ ಮಾಡಿದೆ, ಆ ಬಡ ಹೆಣ್ಣು ಮಕ್ಕಳಿಗೆ ಚಳಿಯಾದಂತೆ ರಾಹುಲ್ ಗಾಂಧಿಗೂ ಚಳಿಯಾಗುತ್ತಿರುತ್ತೆ ಎಂಬ ಸಂದೇಶ ಕೊಡಲು ಹೊರಟೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!