Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆ ಶಿವರಾಮ್ ಅವರ ಬಾಲ್ಯ ಹೇಗಿತ್ತು..? ಐಎಎಸ್ ಬಿಟ್ಟು ಸಿನಿಮಾ ರಂಗಕ್ಕೆ ಬಂದಿದ್ದೇಕೆ..?

Facebook
Twitter
Telegram
WhatsApp

ಬೆಂಗಳೂರು: ನಟ, ರಾಜಕಾರಣಿ ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆ ಶಿವರಾಮ್ ಅವರಿಗೆ ಹೃದಯಾಘಾತವೂ ಸಂಭವಿಸಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಕೆ ಶಿವರಾಮ್ ಅವರು ಕನ್ನಡದಲ್ಲಿಯೇ ಬರೆದು ಮೊದಲ ಕನ್ನಡಿಗರೆಂಬ ಹೆಗ್ಗಳಿಕೆ ಇವರದ್ದಾಗಿತ್ತು. ಆದರೆ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

 

ಕೆ ಶಿವರಾಮ್ ಅವರು, ಇವರ ಪೂರ್ತಿ ಹೆಸರು ಶಿವರಾಮ್ ಕೆಂಪಯ್ಯ ಎಂದು. ರಾಮನಗರದ ಉರಗಲ್ಲಿ ಎಂಬ ಗ್ರಾಮದಲ್ಲಿ 1953 ಏಪ್ರಿಲ್ 6 ರಂದು ಜನಿಸಿದವರು. ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಮುಗಿಸಿ, ಬೆಂಗಳೂರಿಗೆ ಬಂದರು. ಮಲ್ಲೇಶ್ವರಂನಲ್ಲಿ ಪ್ರೌಢ ಶಿಕ್ಷಣವನ್ನು ಮುಗಿಸಿದ್ದರು. ಅದರ ಜೊತೆಗೆನೆ ಶೀಘ್ರಲಿಪಿ ಕೋರ್ಟ್ ಹಾಗೂ ಕನ್ನಡದ ಟೈಪಿಂಗ್ ಕೂಡ ಮುಗಿಸಿದ್ದರು. ಬಳಿಕ ಸರ್ಕಾರಿ ಉದ್ಯೋಗವನ್ನು ಪಡೆದರು.

1973ರಲ್ಲಿ ಅಪರಾಧ ತನಿಖಾ ವಿಭಾಗ ಸೇರಿದರು. ಸರ್ಕಾರಿ ಉದ್ಯೋಗ ಮಾಡುತ್ತಲೆ, ಎರಡು ಪದವಿಯನ್ನು ಪಡೆದರು. 1982ರಲ್ಲಿ ಮೈಸೂರು ವಿವಿಯಿಂದ ಮಾಸ್ಟರ ಆಫ್ ಹಾರ್ಟ್ ಪದವಿಯನ್ನು ಪಡೆದರು. 1985ರಲ್ಲಿ ಕೆಎಎಸ್ ನಲ್ಲಿ ಪಾಸಾಗಿ ಉಪ ಪೊಲೀಸ್ ಅಧೀಕ್ಷಕರಾಗಿ ಆಯ್ಕೆಯಾದರು. 1986ರಲ್ಲಿ ಕರ್ನಾಟಕ ಆಡಳಿತ ಸೇವಾ ಪರೀಕ್ಷೆಯನ್ನು ಬರೆದು ಒಂದನೇ ರ್ಯಾಂಕ್ ಬರುತ್ತಾರೆ. ಸಹಾಯಕ ಪೊಲೀಸ್ ಕಮಿಷನರ್ ಆಗಿಯೂ ಸೇವೆ ಸಲ್ಲಿಸುತ್ತಾರೆ. ಬಳಿಕ ಐಎಎಸ್ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಾರೆ. ಕನ್ನಡದಲ್ಲಿಯೇ ಪರೀಕ್ಷೆ ಬರೆದು ಪಾಸಾಗುತ್ತಾರೆ. ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಪಾಸ್ ಆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಅವರ ತಂದೆ ನಾಟಕಗಳನ್ನು ಕಲಿಸಿಕೊಡುವ ಟೀಚರ್ ಆಗಿದ್ದರು. ಕೆ ಶಿವರಾಮ್ ಅವರು ಕೂಡ ನಂತರದ ದಿನಗಳಲ್ಲಿ ಬಣ್ಣದ ಲೋಕಕ್ಕೆ ಬರುತ್ತಾರೆ. ಹಲವು ಸಿನಿಮಾಗಳನ್ನು ಮಾಡುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!