ಕೆ ಶಿವರಾಮ್ ಅವರ ಬಾಲ್ಯ ಹೇಗಿತ್ತು..? ಐಎಎಸ್ ಬಿಟ್ಟು ಸಿನಿಮಾ ರಂಗಕ್ಕೆ ಬಂದಿದ್ದೇಕೆ..?

ಬೆಂಗಳೂರು: ನಟ, ರಾಜಕಾರಣಿ ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆ ಶಿವರಾಮ್ ಅವರಿಗೆ ಹೃದಯಾಘಾತವೂ ಸಂಭವಿಸಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಕೆ ಶಿವರಾಮ್ ಅವರು ಕನ್ನಡದಲ್ಲಿಯೇ ಬರೆದು ಮೊದಲ ಕನ್ನಡಿಗರೆಂಬ ಹೆಗ್ಗಳಿಕೆ ಇವರದ್ದಾಗಿತ್ತು. ಆದರೆ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

 

ಕೆ ಶಿವರಾಮ್ ಅವರು, ಇವರ ಪೂರ್ತಿ ಹೆಸರು ಶಿವರಾಮ್ ಕೆಂಪಯ್ಯ ಎಂದು. ರಾಮನಗರದ ಉರಗಲ್ಲಿ ಎಂಬ ಗ್ರಾಮದಲ್ಲಿ 1953 ಏಪ್ರಿಲ್ 6 ರಂದು ಜನಿಸಿದವರು. ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಮುಗಿಸಿ, ಬೆಂಗಳೂರಿಗೆ ಬಂದರು. ಮಲ್ಲೇಶ್ವರಂನಲ್ಲಿ ಪ್ರೌಢ ಶಿಕ್ಷಣವನ್ನು ಮುಗಿಸಿದ್ದರು. ಅದರ ಜೊತೆಗೆನೆ ಶೀಘ್ರಲಿಪಿ ಕೋರ್ಟ್ ಹಾಗೂ ಕನ್ನಡದ ಟೈಪಿಂಗ್ ಕೂಡ ಮುಗಿಸಿದ್ದರು. ಬಳಿಕ ಸರ್ಕಾರಿ ಉದ್ಯೋಗವನ್ನು ಪಡೆದರು.

1973ರಲ್ಲಿ ಅಪರಾಧ ತನಿಖಾ ವಿಭಾಗ ಸೇರಿದರು. ಸರ್ಕಾರಿ ಉದ್ಯೋಗ ಮಾಡುತ್ತಲೆ, ಎರಡು ಪದವಿಯನ್ನು ಪಡೆದರು. 1982ರಲ್ಲಿ ಮೈಸೂರು ವಿವಿಯಿಂದ ಮಾಸ್ಟರ ಆಫ್ ಹಾರ್ಟ್ ಪದವಿಯನ್ನು ಪಡೆದರು. 1985ರಲ್ಲಿ ಕೆಎಎಸ್ ನಲ್ಲಿ ಪಾಸಾಗಿ ಉಪ ಪೊಲೀಸ್ ಅಧೀಕ್ಷಕರಾಗಿ ಆಯ್ಕೆಯಾದರು. 1986ರಲ್ಲಿ ಕರ್ನಾಟಕ ಆಡಳಿತ ಸೇವಾ ಪರೀಕ್ಷೆಯನ್ನು ಬರೆದು ಒಂದನೇ ರ್ಯಾಂಕ್ ಬರುತ್ತಾರೆ. ಸಹಾಯಕ ಪೊಲೀಸ್ ಕಮಿಷನರ್ ಆಗಿಯೂ ಸೇವೆ ಸಲ್ಲಿಸುತ್ತಾರೆ. ಬಳಿಕ ಐಎಎಸ್ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಾರೆ. ಕನ್ನಡದಲ್ಲಿಯೇ ಪರೀಕ್ಷೆ ಬರೆದು ಪಾಸಾಗುತ್ತಾರೆ. ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಪಾಸ್ ಆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಅವರ ತಂದೆ ನಾಟಕಗಳನ್ನು ಕಲಿಸಿಕೊಡುವ ಟೀಚರ್ ಆಗಿದ್ದರು. ಕೆ ಶಿವರಾಮ್ ಅವರು ಕೂಡ ನಂತರದ ದಿನಗಳಲ್ಲಿ ಬಣ್ಣದ ಲೋಕಕ್ಕೆ ಬರುತ್ತಾರೆ. ಹಲವು ಸಿನಿಮಾಗಳನ್ನು ಮಾಡುತ್ತಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

47 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago