ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 22 : ಬೆಳಗಾವಿಯಲ್ಲಿ ಮರಾಠಿ ಪುಂಡರ ಉಪಟಳ ವಿರೋಧಿಸಿ ವಿವಿಧ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಚಿತ್ರದುರ್ಗದಲ್ಲಿ ಬಂದ್ಗೆ ಯಾವುದೇ ಪ್ರತಿಕ್ರಿಯೆ ದೊರಕಲಿಲ್ಲ. ಅಂಗಡಿ ಮುಂಗಟ್ಟು ತೆರೆದಿದ್ದು, ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆಯಿತು.
ಬಸ್, ಆಟೋಗಳು ಮಾಮೂಲಿನಂತೆ ಸಂಚರಿಸಿದವು. ಶಾಲೆ-ಕಾಲೇಜುಗಳಿಗೆ ಮಕ್ಕಳು ನಿರ್ಭಯವಾಗಿ ಹೋಗುತ್ತಿದ್ದುದು ಕಂಡು ಬಂದಿತು. ಬೆಳಗಿನಿಂದಲೆ ಗಾಂಧಿ ವೃತ್ತ, ಒನಕೆ ಓಬವ್ವ ಸರ್ಕಲ್ ಹಾಗೂ ಎಸ್.ಬಿ.ಎಂ.ವೃತ್ತದಲ್ಲಿ ಪೊಲೀಸ್ ಪಹರೆ ಹಾಕಲಾಗಿತ್ತು. ಪ್ರತಿಭಟನಾಕಾರರು ಎಲ್ಲಿಯೂ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಲಿಲ್ಲ.
ಕರವೆ ಪ್ರತಿಭಟನೆ : ಕರ್ನಾಟಕ ರಕ್ಷಣಾ ವೇದಿಕೆ ಹೆಚ್.ಶಿವರಾಮೇಗೌಡ ಬಣದ ಕಾರ್ಯಕರ್ತರು ಗಾಂಧಿ ವೃತ್ತದಿಂದ ಒನಕೆ ಓಬವ್ವ ವೃತ್ತದವರೆಗೆ ಮೆರವಣಿಗೆ ಮೂಲಕ ಆಗಮಿಸಿ ಬೆಳಗಾವಿಯಲ್ಲಿ ಮರಾಠರ ಪುಂಡಾಟಿಕೆ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರವೆ ಜಿಲ್ಲಾಧ್ಯಕ್ಷ ಕೆ.ಆರ್.ಮಂಜುನಾಥ್ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠರು ನಡೆಸುತ್ತಿರುವ ದೌರ್ಜನ್ಯ, ದಬ್ಬಾಳಿಕೆ ನಿಲ್ಲಬೇಕು. ರಾಜ್ಯದ ಜನತೆಯ ಒಳಿತಿಗಾಗಿ ನಾವುಗಳು ಪ್ರತಿಭಟನೆಗೆ ಇಳಿದಿದ್ದೇವೆ. ಎಂ.ಇ.ಎಸ್. ಶಿವಸೇನೆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾದಿತೆಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದರು.
ಬೆಳಗಾವಿಯಲ್ಲಿ ನಮ್ಮ ರಾಜಕಾರಣಿಗಳು ಮತ ಓಲೈಕೆಗಾಗಿ ಮರಾಠರ ಉಪಟಳಕ್ಕೆ ಕಡಿವಾಣ ಹಾಕದಿರುವುದು ನಾಚಿಕೆಗೇಡಿನ ಸಂಗತಿ. ಬೆಳಗಾವಿ ನಮ್ಮದು ಒಂದಿಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ. ಕರ್ನಾಟಕದ ರಾಜಕಾರಣಿಗಳು ನೆಲ, ಜಲ, ಭಾಷೆಯ ಬಗ್ಗೆ ಅಭಿಮಾನ ಮೈಗೂಡಿಸಿಕೊಂಡು ಕನ್ನಡಿಗರ ರಕ್ಷಣೆಗೆ ಮುಂದಾಗಬೇಕೆಂದು ಕೆ.ಆರ್.ಮಂಜುನಾಥ್ ಒತ್ತಾಯಿಸಿದರು.
ಕರವೇ ತಾಲ್ಲೂಕು ಅಧ್ಯಕ್ಷ ಹೆಚ್.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಪಿ.ಜಿ.ಗೋವಿಂದರಾಜು, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷ ಓಬಣ್ಣಗೌಡ, ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ್ನಾಯ್ಕ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್