Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಬ್ಬಳ್ಳಿ – ಧಾರಾವಾಡ ಪೊಲೀಸ್ ಆಯುಕ್ತರ ಬದಲಾವಣೆ : ರೇಣುಕಾ ಜಾಗಕ್ಕೆ ಬಂದ್ರು ಶಶಿಕುಮಾರ್

Facebook
Twitter
Telegram
WhatsApp

ಹುಬ್ಬಳ್ಳಿ: ಕಳೆದ ಕೆಲವು ದಿನಗಳ ಹಿಂದೆ ನೇಹಾ ಕೊಲೆಯಿಂದಾಗಿ ಇಡೀ ಹುಬ್ಬಳ್ಳಿ ಮಂದಿ ಬೆಚ್ಚಿ ಬಿದ್ದರು. ಅದಾದ ಕೆಲವೇ ದಿನಗಳ ಮತ್ತೊಬ್ಬ ವಿದ್ಯಾರ್ಥಿಯನ್ನು ಅದೇ ಥರ ಕೊಲ್ಲಲಾಗಿತ್ತು. ಮೂರು ತಿಂಗಳ ಅವಧಿಯಲ್ಲಿ ಮೂರು ಕೊಲೆಗಳಾಗಿತ್ತು. ಅಲ್ಲಿನ ಕಾನೂನು ವ್ಯವಸ್ಥೆ ಸರಿ ಇಲ್ಲ ಎಂದೇ ಹುಬ್ಬಳ್ಳಿ ಜನತೆ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಇದೀಗ ಪೊಲೀಸ್ ಆಯುಕ್ತರ ಬದಲಾವಣೆಯಾಗಿದೆ. ಹೊಸದಾಗಿ ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

 

ಹುಬ್ಬಳ್ಳಿ – ಧಾರವಾಡ ಪೊಲೀಸ್ ಆಯುಜ್ತರಾಗಿ ರೇಣುಕಾ ಸುಕುಮಾರ್ ಅವರು ಕಾರ್ಯ ನಿರ್ವಹಿಸುತ್ತಾ ಇದ್ದರು. ಇದೀಗ ದಿಢೀರನೇ ಅವರ ವರ್ಗಾವಣೆಯಾಗಿದೆ. ಪೊಲೀಸ್ ಆಯುಜ್ತರಾಗಿ ಶಶಿಕುಮಾರ್ ಚಾರ್ಜ್ ತೆಗೆದುಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನೇಹಾ ಹೀರೇಮಠ, ಅಂಜಲಿ ಅಂಬಿಗೇರ ಕೊಲೆಯಾಗಿತ್ತು. ಕೊಲೆಯಾದ ನಂತರ ಹಲವು ಒ್ರಕರಣಗಳು ಬೆಳಕಿಗೆ ಬಂದವು. ಇದನ್ನು ವಿರೋಧಿಸಿ, ಸಂಘ ಸಂಸ್ಥೆಗಳು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನು ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಕೂಡ ಎಲ್ಲರಿಗೂ ಆತಂಕ ಉಂಟು ಮಾಡಿದ್ದಂತ ಕೇಸ್ ಆಗಿತ್ತು. ಈ ಬಾಂಬ್ ಬ್ಲಾಸ್ಟ್ ಗೂ ಹುಬ್ಬಳ್ಳಿಯ ನಂಟು ಇದ್ದದ್ದು ಬೆಳಕಿಗೆ ಬಂದಿತ್ತು. ಎಸ್ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾಗ ಏಕಕಾಲದಲ್ಲಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದರು.

ಇಷ್ಟೆಲ್ಲಾ ಅಪರಾಧ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಪೊಲೀಸ್ ಆಯುಕ್ತರ ಬದಲಾವಣೆಯಾಗಿದ್ದು, ಮಂಗಳೂರ, ಬೆಂಗಳೂರಿನಲ್ಲಿ ಹೆಸರು ಮಾಡಿರುವ ಶಶಿಕುಮಾರ್ ಅವರನ್ನು ನೇಮಕ ಮಾಡಿದ್ದಾರೆ. ಮೊದಲಿದ್ದ ರೇಣುಕಾ ಸುಕುಮಾರ್ ಅವರನ್ನು ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!