ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ: ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಜನರು ಭಾಗಿ : ಸಚಿವ ಡಿ.ಸುಧಾಕರ್

ಚಿತ್ರದುರ್ಗ. ಸೆ.09: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಜಿಲ್ಲೆಯ ಲಕ್ಷಕ್ಕೂ ಹೆಚ್ಚು ಜನರಿಂದ 140 ಕಿ.ಮೀ ವ್ಯಾಪ್ತಿ ಮಾನವ ಸರಪಳಿ ನಿರ್ಮಾಣಗೊಳ್ಳಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರ ಬೃಹತ್ ಆಂದೋಲನ ರೂಪಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಲಿದೆ. ಚುನಾಯಿತ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಮಹಿಳಾ ಸಂಘಟನೆಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಸ್ತಿçÃಶಕ್ತಿ, ಯುವಕ ಸಂಘಗಳು ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಗೊಳಿಸಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ತಾಲ್ಲೂಕುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಮಾಡಿಕೊಟ್ಟಿದೆ ಎಂದರು.

ಸರ್ಕಾರ ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ಸಂಕಷ್ಟಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಜನಪರ ಆಡಳಿತ ನೀಡುವಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದೆ. ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ, ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಗುವುದು ಈ ಕಾರ್ಯಕ್ರಮಕ್ಕೆ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳು ಸಹಕಾರ ನೀಡಿ ಎಂದು ಮನವಿ ಮಾಡಿದರು.

ಶಾಸಕ ಟಿ.ರಘುಮೂರ್ತಿ ಮಾತನಾಡಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ 40 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸಲಾಗಿದೆ.ಇಂತಹ ಕಾರ್ಯಕ್ರಮಗಳಿಂದ ಎಲ್ಲರಲ್ಲೂ ದೇಶದ ಬಗ್ಗೆ ಅಭಿಮಾನ ಮೂಡಲಿದೆ. ಸರ್ಕಾರ ಇದೇ ಮೊದಲ ಬಾರಿಗೆ ಭಾರಿ ಪ್ರಮಾಣದ ಕಾರ್ಯಕ್ರಮ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಿದೆ ಎಂದರು.

 

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಜಿಲ್ಲೆಯಲ್ಲಿ ಹೆಚ್ಚು ಯಶಸ್ಸು ಕಾಣಬೇಕಿದೆ. ಪ್ರತಿ ಕಿ.ಮೀಗೆ 850ರಂತೆ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ. ಇದೇ ಸೆ.15ರಂದು ಭಾನುವಾರ ಬೆಳಗ್ಗೆ ಈ ಕಾರ್ಯಕ್ರಮ ಆರಂಭವಾಗಲಿದ್ದು, ಮಾನವ ಸರಪಳಿ ನಿರ್ಮಿಸುವವರಿಗೆ ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತೆ ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ತಹಶೀಲ್ದಾರ್ ರೇಹಾನ್ ಪಾಷ, ಇಒ ಶಶಿಧರ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

24 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago