Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಶಿಸುತ್ತಿರುವ ಮಾನವೀಯ ಸಂಬಂಧಗಳು: ಗಿರೀಶ್ ಕಾಸರವಳ್ಳಿ ವಿಷಾದ

---Advertisement---

ತೀರ್ಥಹಳ್ಳಿ, ಮೇ 05- ಮಾನವ ಸಂಬಂಧಗಳನ್ನು ಜಾಗತೀಕರಣ ನುಂಗಿ ಹಾಕುತ್ತಿದೆ. ಸಾಮಾಜಿಕ ಚಿಂತನೆ ದೂರ ಸರಿದು ಏಕವ್ಯಕ್ತಿ ಚಿಂತನೆ ಮುನ್ನೆಲೆಗೆ ಬರುತ್ತಿದೆ. ಇಂತಹ ಕಾಲಘಟ್ಟದಲ್ಲಿ ಕಡಿದಾಳ್ ಪ್ರಕಾಶ್ ಅವರು ತಾವು ಕಂಡ ವಿಶ್ವ ಮಾನವರನ್ನು ನಮಗೆ ಪರಿಚಯಿಸಿದ್ದಾರೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಅಭಿಪ್ರಾಯಪಟ್ಟರು.

ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಅಭಿರುಚಿ ಪ್ರಕಾಶನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರ ಕೃತಿ ‘ನನ್ನೂರಿನ ಶ್ರೀಸಾಮಾನ್ಯರು’ಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಸಾಮಾನ್ಯರ ಅಸಾಮಾನ್ಯ ಬುದ್ದಿವಂತಿಕೆ, ಪ್ರಾಮಾಣಿಕತೆ, ಚಾಕಚಕ್ಯತೆಗಳ ವ್ಯಕ್ತಿತ್ವದ ಅನಾವರಣ ಕೃತಿಯಲ್ಲಿ ಬಿಂಬಿತವಾಗಿವೆ. ಗತವು ಪ್ರಸ್ತುತವಾಗುವ ಪಠ್ಯದ ಚಿತ್ರಣವನ್ನು ಕಾಣಬಹುದು. ಗತದ ನಡೆಯೊಂದಿಗೆ ಮೌಲ್ಯವನ್ನು ಬಿಚ್ಚಿಡುವ ಪ್ರಯತ್ನ ಹಾಗೂ ಸಂವಾದಕ್ಕೆ ಆಹ್ವಾನಿಸುವ ಬರವಣಿಗೆ ಕೃತಿಯಲ್ಲಿದೆ. ಸಾಂಸ್ಕೃತಿಕ ನೆಲೆಯು ಗತದ ವೈಭವೀಕರಣವಿಲ್ಲದೆ ದಾಖಲಾಗಿದೆ ಎಂದು ತಿಳಿಸಿದರು.

‘ನಾ ಕಂಡಂತೆ ತೇಜಸ್ವಿ-ಶಾಮಣ್ಣ’ ಕೃತಿಯ ಪರಿಷ್ಕೃತ ಆವೃತ್ತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಪತ್ರಕರ್ತ ಜಿ.ಎನ್.ಮೋಹನ್, ಕೃತಿಯ ಕನ್ನಡಿಯಲ್ಲಿ ತೇಜಸ್ವಿ, ಶ್ಯಾಮಣ್ಣ ಮತ್ತು ಪ್ರಕಾಶ್ ಅವರ ಪ್ರತಿಬಿಂಬವಿದೆ. ಸಂಬಂಧಗಳ ಗ್ರಹಿಸುವಿಕೆಯೊಂದಿಗೆ ಜನರ ಮೆರವಣಿಗೆ ಕಾಣಬಹುದು. ಇದೊಂದು ಜುಗಲ್‌ಬಂದಿ ಕೃತಿ. ಸಾಮಾನ್ಯ ಮತ್ತು ಅಸಾಮಾನ್ಯರ ನಡುವಿನ ಪಾತ್ರಗಳು ಚಿತ್ತಾರ ಮೂಡಿಸಿವೆ. ಓದುಗರನ್ನು ಆಕರ್ಷಿಸುವ ಗುಣ ಹೊಂದಿದೆ ಎಂದರು.

‘ಕಟ್ಟುವ ಹಾದಿಯಲ್ಲಿ ಕುವೆಂಪು ಪ್ರತಿಷ್ಠಾನದ ಉಗಮ-ವಿಕಾಸ’ ಕೃತಿ ಕುರಿತು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಮಾತನಾಡಿ ಕುವೆಂಪು ಅವರ ಕವಿಮನೆ ಸೇರಿದಂತೆ ಕುಪ್ಪಳಿಯಲ್ಲಿ ಜರುಗಿದ ಎಲ್ಲಾ ಮಹತ್ವದ ಕೆಲಸಗಳ ಹಿಂದೆ ಕಡಿದಾಳ್ ಪ್ರಕಾಶ್ ಅವರ ಮುನ್ನೋಟವಿದೆ. ಹೀಗಾಗಿ ಕವಿ ರವೀಂದ್ರರ ಶಾಂತಿ ನಿಕೇತನವನ್ನೂ ಮೀರಿ ಕುಪ್ಪಳಿ ಅಭಿವೃದ್ಧಿಗೊಂಡಿದೆ ಎಂದರು. ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆ ವಹಿಸಿದ್ದರು. ಕೃತಿಕಾರ ಕಡಿದಾಳ್ ಪ್ರಕಾಶ್, ಅಭಿರುಚಿ ಗಣೇಶ್ ಉಪಸ್ಥಿತರಿದ್ದರು. ಲೇಖಕ ಬಿ.ಆರ್. ಸತ್ಯನಾರಾಯಣ್ ಕಾರ್ಯಕ್ರಮ ನಿರ್ವಹಿಸಿದರು.

ಕೃತಿ ವಿವರ: ನನ್ನೂರಿನ ಶ್ರೀಸಾಮಾನ್ಯರು
ಪುಟ: 160
ಬೆಲೆ: ರೂ 175
ಪ್ರ: ಅಭಿರುಚಿ

ಕೃತಿ: ನಾ ಕಂಡಂತೆ ತೇಜಸ್ವಿ ಶಾಮಣ್ಣ
ಪುಟ: 176
ಬೆಲೆ: ರೂ 175
ಪ್ರ: ಅಭಿರುಚಿ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...