ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ : 44 ಲಕ್ಷ ಸಂಗ್ರಹ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 04 : ತಾಲೂಕಿನ ನಾಯಕನಹಟ್ಟಿ ಐತಿಹಾಸಿಕ ಗುರು- ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಜಾತ್ರೆ ಪ್ರಯುಕ್ತ ಹುಂಡಿ ಹಣದ ಎಣಿಕೆ ಕಾರ್ಯವನ್ನು ಇಂದು ದೇವಾಲಯದ ಆವರಣದಲ್ಲಿ ಬ್ಯಾಂಕ್‌ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು.

ವಾರ್ಷಿಕ ಜಾತ್ರೆ ಹಾಗೂ ಮರಿಪರಿಷೆಯ ನಂತರ ಹುಂಡಿ ಹಣದ ಎಣಿಕೆ ಕಾರ್ಯ ಮಾಡಲಾಗುತ್ತದೆ. ಮೊದಲು ಹೊರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ತಹಶೀಲ್ದಾರ್ ಹಾಗೂ ದೇವಾಲಯ ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದಲ್ಲಿ ದೇವಸ್ಥಾನದ ಹೊರಮಠ ಹಾಗೂ ಒಳ ಮಠ ಏಣಿಕ್ಕೆ ಕಾರ್ಯ ಹಮ್ಮಿಕೊಳ್ಳಲಾಗಿತ್ತು.

ಹೊರಮಠ ಕಾಣಿಕೆ ಹುಂಡಿಯಲ್ಲಿ ಸುಮಾರು 8,33,510, ಒಳಮಠದಲ್ಲಿ 26,71,990 ಹಾಗೂ ದಾಸೋಹದಲ್ಲಿ 8,93,990 ಸಂಗ್ರಹವಾಗಿದೆ. ಒಟ್ಟಾರೆಯಾಗಿ ಈ ವರ್ಷದ ಜಾತ್ರೆಗೆ ಮೊದಲು 43,99,490 ಹಣ ಸಂಗ್ರಹವಾಗಿದೆ. ಸಂಗ್ರಹವಾದ ಹಣವನ್ನು ದೇವಾಲಯದ ಕೆನರಾ ಬ್ಯಾಂಕ್ ಖಾತೆಗೆ ಜಮಾ ಮಾಡಲಾಯಿತು.

ಇನ್ನಿತರೆ ಬೆಳ್ಳಿ ವಸ್ತುಗಳನ್ನು ಕಂದಾಯ ಇಲಾಖೆಗೆ ಒಪ್ಪಿಸಲಾಯಿತು. ಎಂದು ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಮಾಹಿತಿ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *