Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು | ವದ್ದಿಕೆರೆ ಕಾಲಭೈರವೇಶ್ವರನ ಹುಂಡಿ ಎಣಿಕೆ : 96 ಲಕ್ಷ ಕಾಣಿಕೆ ಹಣ ಸಂಗ್ರಹ

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 13 : ತಾಲ್ಲೂಕಿನ ಶ್ರೀ ಕ್ಷೇತ್ರ ವದ್ದಿಕೆರೆ ಶ್ರೀ ಕಾಲಭೈರವೇಶ್ವರ ಯಾನೆ ಸಿದ್ದೇಶ್ವರ ಸ್ವಾಮಿಯ ಹುಂಡಿ ಹಣ ಎಣಿಕೆ ನಡೆದಿದೆ. ಈ ಬಾರಿ ಹುಂಡಿಯಲ್ಲಿ 96,32,630 ರೂಪಾಯಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಆದರೆ ಕಳೆದ ಬಾರಿಗಿಂತ ಈ ಬಾರಿ ಹುಂಡಿ ಹಣ ಸಂಗ್ರಹಣೆಯಲ್ಲಿ ಕಡಿಮೆ ಆಗಿದೆ.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಧಿಸೂಚಿತ “ಎ” ಪ್ರವರ್ಗದ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ಯಾನೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ಎಂ.ಕಾರ್ತಿಕ್, ತಹಶೀಲ್ದಾರ್ ರಾಜೇಶ್ ಕುಮಾರ್ ಸಮ್ಮುಖದಲ್ಲಿ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಗಳ ಹಣವನ್ನು ಎಣಿಕೆ ಮಾಡಲಾಗಿದೆ.

ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ದೇವಸ್ಥಾನದ ಹೆಸರಿನಲ್ಲಿ ತೆರೆದಿರುವ ಉಳಿತಾಯ ಖಾತೆಗಳಲ್ಲಿ ಇಡಲಾಗಿದೆ. ಕಳೆದ 2023, ಸೆಪ್ಟೆಂಬರ್ 27ರಂದು ರಂದು ಎಣಿಕೆ ನಡೆದಿತ್ತು. ಪ್ರಥಮ ಬಾರಿಗೆ ದಾಖಲೆ ಮೊತ್ತದ ಒಂದು ಕೋಟಿ 24 ಲಕ್ಷದ 67 ಸಾವಿರದ 800 ರೂಪಾಯಿ ಹಣ, ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿತ್ತು. ಅಂದಿನ ಎಣಿಕೆಯ ಹುಂಡಿಯಲ್ಲಿ ವಿದೇಶಿ ಕರೆನ್ಸಿಗಳು ಸೇರಿದಂತೆ, ಭಕ್ತರು ಹರಕೆ ರೂಪದಲ್ಲಿ ಸಲ್ಲಿಸಿದ ಬಂಗಾರ ಮತ್ತು ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಸ್ವಾಮಿಗೆ ಅರ್ಪಿತವಾಗಿದ್ದವು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ಎಂ.ಕಾರ್ತಿಕ್‌, ತಹಶೀಲ್ದಾರ್ ರಾಜೇಶ್ ಕುಮಾರ್. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಹಿರಿಯೂರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು, ವದ್ದಿಕೆರೆ ಗ್ರಾಮಸ್ಥರುಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...