Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಹ್ಲಿ ಮಗಳ ಅತ್ಯಾಚಾರದ ಬೆದರಿಕೆ ಹಾಕಿದ್ದ ವಿಕೃತ ಮನಸ್ಥಿತಿ ವ್ಯಕ್ತಿ ಅರೆಸ್ಟ್..!

Facebook
Twitter
Telegram
WhatsApp

ಏನೇ ಮಾತಾಡುವಾಗಲೂ ನಾಲಿಗೆಯ ಮೇಲೆ ಎಚ್ಚರವಿರಬೇಕು. ಆಟವೇ ಬೇರೆ, ಧರ್ಮವೇ ಬೇರೆ, ವೈಯಕ್ತಿಕ ಜೀವನವೇ ಬೇರೆ. ಆಟದ ವಿಚಾರಕ್ಕೆ ಆತ ವಿಕೃತ ಮನಸ್ಥಿತಿಯವ ಕೊಹ್ಲಿಯ ಆ ಪುಟ್ಟ ಮಗಳನ್ನ ಎಳೆ ತಂದಿದ್ದ. ಇದೀಗ ಮುಂಬೈ ಪೊಲೀಸರು ತಮ್ಮ ಸಾಮರ್ಥ್ಯ ತೋರಿಸಿ, ಆತನಿಗೆ ಬಿಸಿ ಮುಟ್ಟಿಸಿದ್ದಾರೆ.

ಟೀ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕೋಮು ದಾಳಿ ನಡೆಸಿದ್ದನ್ನು ಯಾರು ಮರೆತಿರೋಲ್ಲ. ಆಗ ಇಡೀ ಟೀಂ ಇಂಡಿಯಾ ನಾಯಕರು ಶಮಿ ಪರವಾಗಿ ನಿಂತಿದ್ದರು. ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಸೆಹ್ವಾಗ್ ಸೇರಿದಂತೆ ಹಲವರು ಶಮಿ ಪರವಾಗಿ ಮಾತಾಡಿದ್ದರು. ಕೊಹ್ಲಿ ಕೂಡ ಅದನ್ನೇ ಜಪಿಸಿದ್ದರು.

ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡುವ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯುಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ವಿರಾಟ್ ಕೊಹ್ಲಿ ಸ್ಪಷ್ಟವಾಗಿ ಹೇಳಿದರು. ಅಷ್ಟೇ ಅಲ್ಲದೆ ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ ಎಂದಿದ್ದರು. ಆಗ ಕೊಹ್ಲಿ ವಿರುದ್ಧ ರೊಚ್ಚಿಗೆದ್ದಿದ್ದ ಕಿಡಿಗೇಡಿಗಳು ಕೊಹ್ಲಿ ನಿಂದಿಸುವ ಬರದಲ್ಲಿ ಆ ಪುಟಾಣಿ 10 ತಿಂಗಳ ಮಗಳ ಬಗ್ಗೆ ಮಾತನಾಡಿದ್ದ. ಅತ್ಯಾಚಾರದ ಬೆದರಿಕೆ ಹಾಕಿದ್ದ.

ಸೋಷಿಯಲ್ ಮೀಡಿಯಾ ಜಾಡು ಹಿಡಿದು ಹೊರಟ ಮುಂಬೈ ಸೈಬರ್ ಸೆಲ್ ಪೊಲೀಸರು, ಇದೀಗ ಆ ಕೀಚಕನನ್ನ ಬಂಧಿಸಿದ್ದಾರೆ. 23 ವರ್ಷದ ರಾಮನಾಗೇಶ್ ಎಂಬಾತನೆ ಈ ರೀತಿ ಕಮೆಂಟ್ ಹಾಕಿದ್ದದ್ದು. ಈತ ಇಂಜಿನಿಯರಿಂಗ್ ವಿದ್ಯಾರ್ಥಿ ಕೂಡ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!