ಹುಬ್ಬಳ್ಳಿ: ಅಸ್ಪೃಶ್ಯತೆಯ ಬಗ್ಗೆ ಇತ್ತಿಚೆಗಷ್ಟೇ ಗೂಳಿಹಟ್ಟಿ ಶೇಖರ್ ಮಾತನಾಡಿದ್ದರು. ಜಾತಿ ರಾಜಕಾರಣಕ್ಕೆ ನಾಗ್ಪುರದ ಹೆಡಗೇವಾರ್ ಸ್ಮಾರಕದೊಳಗೆ ನನ್ನನ್ನು ಬಿಡಲು ಅನುಮತಿ ನಿರಾಕರಿಸಿದ್ದರು ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದರು. ಇದೀಗ ಆ ಮಾತಿಗೆ ಮುಖ್ಯಮಂತ್ರಿ ಚಂದ್ರು ಕೂಡ ಧ್ವನಿಗೂಡೊಸಿದ್ದು, ನನಗೂ ಬಿಜೆಪಿಯಲ್ಲಿದ್ದಾಗ ಅಸ್ಪೃಶ್ಯತೆಯ ಅನುಭವ ಆಗಿದೆ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ, ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು. ನಾನೂ ಕೂಡ ಬಿಜೆಪಿಯಲ್ಲಿ ಇದ್ದು, ಬಂದವ. ಕೆಲವೊಂದು ಕಡೆ ನಮಗೆ ಆಹ್ವಾನವೂ ಇರುತ್ತಿರಲಿಲ್ಲ. ಕೆಲವೊಂದು ಕಡೆ ನಮ್ಮನ್ನು ವಿಶ್ವಾಸಕ್ಕೂ ತೆಗೆದುಕೊಳ್ಳುತ್ತಿರಲಿಲ್ಲ. ಗೂಳಿಹಟ್ಟಿ ಶೇಖರ್ ಹೇಳಿದ ಮೇಲೆ, ಅದು ನನಗೂ ಮನವರಿಕೆ ಆಗುತ್ತಿದೆ ಎಂದು ಬಿಜೆಪಿಯಲ್ಲಿರುವ ಜಾತಿಯ ಬಗ್ಗೆ ಮುಖ್ಯಮಂತ್ರಿ ಚಂದ್ರು ಮಾತನಾಡಿದ್ದಾರೆ.
ಬಿಜೆಪಿಯ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಇತ್ತಿಚೆಗೆ ಪಕ್ಷದ ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ದರು. ರಾಜ್ಯ ವಿಧಾನಸಭಾ ಚುನಾವಣೆ ನಾಲ್ಕು ತಿಂಗಳು ಇರುವ ಮುಂಚೆ, ನಾಗ್ಪುರದ ಆರ್ ಎಸ್ ಎಸ್ ಕಚೇರಿಯಲ್ಲಿರುವ ಹೇಡಗೇವಾರ್ ಸ್ಮಾರಕದ ಒಳಗೆ, ಜಾತಿಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿತ್ತು ಎಂದು ಆರೋಪಿಸಿದ್ದರು. ಇದೀಗ ಜಾತಿ ವಿಚಾರ ಬಿಜೆಒಇಯಲ್ಲಿ ಇರುವುದು ನಿಜ ಎಂಬಂತೆ ಮುಖ್ಯಮಂತ್ರಿ ಚಂದ್ರು ತಮ್ಮ ಅನುಭವವನ್ನು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















