Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಭಿವೃದ್ಧಿ ರಾಜಕಾರಣ ಮಾಡುತ್ತಿರುವುದಕ್ಕೆ ನಾನೇ ಟಾರ್ಗೆಟ್: ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಕಿಡಿ

---Advertisement---

 

 

ಮೈಸೂರು: ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ಅಭಿವೃದ್ಧಿ ವಿಚಾರಕ್ಕೆ ಗುಡುಗಿದ್ದಾರೆ. ಅಭಿವೃದ್ಧಿಯ ರಾಜಕಾರಣ ಮಾಡುತ್ತಿರುವುದಕ್ಕೆ ನಾನೇ ಟಾರ್ಗೆಟ್ ಆಗಿದ್ದೀನಿ ಎಂದು ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದಾರೆ. ನಾನು ಸೋಮಾರಿ ಸಿದ್ದನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿಯ ರಾಜಕಾರಣ ಮಾಡುತ್ತಿದ್ದೇನೆ. ಹೀಗಾಗಿ ನಾನೇ ಟಾರ್ಗೆಟ್ ಆಗಿದ್ದೀನಿ ಎಂದಿದ್ದಾರೆ.

 

ಹುಣಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಅವರು ಅಭದ್ರತೆಯಿಂದ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ 28 ಸಂಸದರಿದ್ದಾರೆ. ಆದರೆ ಪ್ರತಾಪ್ ಸಿಂಹನ ಮೇಲೆ ಮಾತ್ರ ಯಾಕೆ ದಾಳಿ ನಡೆಸುತ್ತಿರುವುದು. ಸಿದ್ದರಾಮಯ್ಯ ಅವರೇ ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಈ ರೀತಿಯ ದ್ವೇಷದ ರಾಜಕಾರಣ ಮಾಡಬೇಡಿ. ಸಿದ್ದರಾಮಯ್ಯ ಅವರು 40 ವರ್ಷದಿಂದ ರಾಜಕಾರಣ ಮಾಡುತ್ತಿದ್ದಾರೆ. ಏನು ಮಾಡಿದ್ದಾರೆ ಹೇಳಿ. ಬಡವರ ಮಕ್ಕಳು ರಾಜಕಾರಣ ಮಾಡಬಾರದಾ..? ನನ್ನ ಮೇಲೆ ಕಾಂಗ್ರೆಸ್ ಯಾಕಷ್ಟು ದ್ವೇಷ ಎಂದು ಪ್ರಶ್ನೆ ಕೇಳಿದ್ದಾರೆ.

 

ನಾನು ಯಾವತ್ತು ನೀನು ಗೌಡ, ಕುರುಬ, ಲಿಂಗಾಯತ ಅಂತ ಜಾತಿ ರಾಜಕಾರಣ ಮಾಡಿಲ್ಲ. ಹೀಗಾವಿಯೇ ನಿರಂತರವಾಗಿ ನನ್ನ ಮೇಲೆ ದಾಳಿ ನಡೆಯುತ್ತಿದೆ. ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತ ಕೂಡಲೇ ಖುರ್ಚಿ ಅಲುಗಾಡುತ್ತಿದೆ. ಇದೆ ಕಾರಣಕ್ಕೆ ಸದಾ ನನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ. ಸಂಸತ್ ಘಟನೆಯ ಬಳಿಕ ಕಾಂಗ್ರೆಸ್ ನನ್ನ ಮೇಲೆ ದಾಳಿ ಜಾಸ್ತಿ ಮಾಡುತ್ತಿದೆ. ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನ ತನಕ ನನ್ನನ್ನೇ ಟಾರ್ಗೆಟ್ ಮಾಡಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...