Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನರೇಂದ್ರ ದಾಮೋದರದಾಸ್ ಮೋದಿ ಎಂಬ ಹೆಸರಿನ ನಾನು : ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ

Facebook
Twitter
Telegram
WhatsApp

ಸುದ್ದಿಒನ್, ನವದೆಹಲಿ, ಜೂ.09 : ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಇಂದು ಸಂಜೆ  7.15ಕ್ಕೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಬೋಧಿಸಿದರು. ಕೇಂದ್ರ ಸಚಿವರಿಗೂ ಪ್ರಮಾಣ ವಚನ ಬೋಧಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅತಿರಥ ಮಹಾರಥರು ನೆರೆದಿದ್ದರು. ಬಿಗಿ ಭದ್ರತೆಯ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ದೇಶ-ವಿದೇಶಗಳ ಗಣ್ಯರು ಪಾಲ್ಗೊಂಡಿದ್ದರು.

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿವಿಧ ದೇಶಗಳ ಪ್ರಧಾನಿಗಳು ಮತ್ತು ಅಧ್ಯಕ್ಷರು ಭಾಗವಹಿಸಿದ್ದರಿಂದ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ರಾಷ್ಟ್ರಪತಿ ಭವನದ ರಕ್ಷಣೆಗೆ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿತ್ತು.  ಅಲ್ಲದೆ ಎನ್‌ಎಸ್‌ಜಿ ಕಮಾಂಡೋಗಳು, ಡ್ರೋನ್‌ಗಳು ಮತ್ತು ಸ್ನೈಪರ್‌ಗಳು ಕೂಡ ಭದ್ರತೆ ಒದಗಿಸಿದ್ದರು. ಕರ್ತವ್ಯ ಪಥ ಪೊಲೀಸ್ ಠಾಣೆ ಸಿಸಿ ಕ್ಯಾಮರಾಗಳ ಮೂಲಕ ವಿವಿಧ ಪ್ರದೇಶಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪ್ರತಿ ರಾಷ್ಟ್ರದ ಮುಖ್ಯಸ್ಥರ ಪ್ರೋಟೋಕಾಲ್ ಅವಶ್ಯಕತೆಗಳ ಪ್ರಕಾರ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಸೆಲೆಬ್ರಿಟಿಗಳು ಉಳಿದುಕೊಳ್ಳುವ ಹೊಟೇಲ್‌ಗಳಲ್ಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಶ್ವರಪ್ಪ ಅವರನ್ನು ಮತ್ತೆ ಆಹ್ವಾನಿಸಿದ ಬಿಜೆಪಿ : ವಾಪಸ್ ಹೋಗ್ತಾರಾ ಈಶ್ವರಪ್ಪ..?

  ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿತ್ತು. ಬಿಜೆಪಿಯಲ್ಲಿಯೇ ಇದ್ದ ಈಶ್ವರಪ್ಪ ಬಂಡಾಯವೆದ್ದು, ಬಿಜೆಪಿ ಅಭ್ಯರ್ಥಿಯ ವಿರುದ್ಧವೇ ಕಣಕ್ಕೆ ಇಳಿದಿದ್ದರು. ಆದರೆ ವಿಜಯೇಂದ್ರ ವಿರುದ್ಧ ಹೀನಾಯವಾಗಿ ಸೋಲು ಕಂಡಿದ್ದರು. ಗೀತಾ ಶಿವರಾಜ್

ದರ್ಶನ್ ನೋಡಲು ಕಡೆಗೂ ಪರಪ್ಪನ ಅಗ್ರಹಾರಕ್ಕೆ ಬಂದ ತಾಯಿ ಹಾಗೂ ಸಹೋದರ..!

  ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ರೇಣುಕಾಸ್ವಾಮಿಗೆ ಎಚ್ಚರಿಕೆ ನೀಡುವುದಕ್ಕೆ ಹೋಗಿ ದರ್ಶನ್ ಅಂಡ್ ಗ್ಯಾಂಗ್ ಕೊಲೆಯನ್ನೇ ಮಾಡಿ, ಜೈಲು ಪಾಲಾಗಿದ್ದಾರೆ.

ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿ.ಎಂ. ಸಿದ್ದರಾಮಯ್ಯ

ಬೆಂಗಳೂರು ಜುಲೈ. 1: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

error: Content is protected !!