Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಷಡ್ಯಂತ್ರಕ್ಕೆಲ್ಲಾ ನಾನು ಹೆದರುವುದಿಲ್ಲ : ಸೂರಜ್ ಬಂಧನದ ಬಳಿಕ ರೇವಣ್ಣ ಪ್ರತಿಕ್ರಿಯೆ

Facebook
Twitter
Telegram
WhatsApp

ಅಸಹಜ ಲೈಂಗಿಕ ಕ್ರಿಯೆ ಆರೋಪದ ಮೇಲೆ ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಅವರ ಬಳಿ ಇದ್ದ ಮೊಬೈಲ್ ಸೀಜ್ ಮಾಡಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್.ಡಿ. ರೇವಣ್ಣ ಮಾತನಾಡಿದ್ದು, ಈ ರೀತಿಯ ಷಡ್ಯಂತ್ರಕ್ಕೆಲ್ಲ ನಾನು ಹೆದರುವುದಿಲ್ಲ ಎಂದಿದ್ದಾರೆ.

ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮಾತನಾಡಿ, ನನಗೆ ದೇವರು ಹಾಗೂ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದು ಗೊತ್ತಿದೆ‌. ಈ ಷಡ್ಯಂತ್ರಕ್ಕೆಲ್ಲ ಹೆದರಿ ಹೋಗಲ್ಲ. ಈ ಷಡ್ಯಂತ್ರ ಮಾಡುತ್ತಿರುವುದು ಯಾರೂ ಎಂಬುದು ಗೊತ್ತಿದೆ. ಅದನ್ನ ಈಗ ಹೇಳಲ್ಲ‌. ಇದನ್ನೆಲ್ಲಾ ಎದುರಿಸುತ್ತೇವೆ. ನಿನ್ನೆ ಸೂರಜ್ ಹೇಳಿಲ್ವಾ ಏನೇನೋ ನಡೆದಿದೆ ಎಂದು. ನಮ್ಮ ಕಡೆಯವರು ದೂರು ಕೊಡಲು ಹೋಗಿದ್ದು ನನಗೆ ಗೊತ್ತಿಲ್ಲ. ಏನೇನೋ ನಡೆಯುತ್ತಿದೆ ಎಂದು ರೇವಣ್ಣ ಹೇಳಿದ್ದಾರೆ.

ಈಗಾಗಲೇ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ರೇವಣ್ಣ ಪುತ್ರ ಪ್ರಜ್ವಲ್ ಜೈಲಿನಲ್ಲಿದ್ದಾರೆ. ಈಗ ಸೂರಜ್ ರೇವಣ್ಣ ಕೂಡ ಅಸಹಜ ಲೈಂಗಿಕ ವಿಚಾರದಲ್ಲಿ ಅರೆಸ್ಟ್ ಆಗಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಅವರನ್ನು ಕೇಳಿದಾಗ ಇಂಥವೆಲ್ಲಾ ನನ್ನ ಬಳಿ ಯಾಕೆ ಇದನ್ನು ಚರ್ಚೆ ಮಾಡುತ್ತೀರಿ ಎಂದು ಗರಂ ಆಗಿದ್ದರು. ಈಗ ಹೆಚ್ ಡಿ ರೇವಣ್ಣ ಅವರು ಇದೆಲ್ಲಾ ಷಡ್ಯಂತ್ರ ಅಂತ ಹೇಳಿದ್ದಾರೆ. ಸದ್ಯ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಸೂರಜ್ ರೇವಣ್ಣ ಕೂಡ ಜೆಡಿಎಸ್ ಕಾರ್ಯಕರ್ತನ ಮೇಲೆ ಪ್ರತಿದೂರು ನೀಡಿದ್ದಾರೆ. ಹೀಗಾಗಿ ದೂರು ನೀಡಿದ್ದು ತಡವಾಗಿದ್ದು ಯಾಕೆ ಎಂಬೆಲ್ಲಾ ಪ್ರಶ್ನೆಗಳನ್ನು ಕೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

error: Content is protected !!