Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ : ಏಳಿಗೆ ಸಹಿಸದವರಿಗೆ ದರ್ಶನ್ ಖಡಕ್ ತಿರುಗೇಟು

---Advertisement---

ವರ್ಷದ ಕೊನೆಯಲ್ಲಿ ರಿಲೀಸ್ ಆದ ಕಾಟೇರ ಸಿನಿಮಾ ಇನ್ನು ಅಬ್ಬರಿಸುತ್ತಲೆ ಇದೆ. ಒಂದೇ ವಾರಕ್ಕೆ ದರ್ಶನ್ ಸಿನಿಮಾ 100 ಕೋಟಿ ಕ್ಲಬ್ ಸೇರಿದೆ. ಇದು ಕನ್ನಡಿಗರಿಗೆಲ್ಲ ಹೆಮ್ಮೆಯ ವಿಚಾರವೇ ಸರಿ. ನಾನ್ ಪ್ಯಾನ್ ಇಂಡಿಯಾ ಸಿನಿಮಾ ಇಷ್ಟು ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿರುವುದು ಎಲ್ಲರಿಗೂ ಖುಷಿ ನೀಡಿದೆ. ಇದರ ನಡುವೆ ನಟ ದರ್ಶನ್ ಹಿತ ಶತ್ರುಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

 

ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ ಎಂದು ಟ್ವೀಟ್ ಮಾಡಿದ್ದಾರೆ.

 

ಕಾಟೇರ ಸಿನಿಮಾ ಪೈರಸಿ ಮಾಡಿದವರಿಗೂ ಈಗಾಗಲೇ ಬಿಸಿ ಮುಟ್ಟಿಸಲಾಗಿದೆ. ಪೈರಸಿ ಮಾಡುತ್ತಿರುವವರ ಸೂಚನೆ ಕೊಟ್ಟರೆ ಸಾಕು, ಅವರನ್ನು ಮಟ್ಟ ಹಾಕಲಾಗುತ್ತಿದೆ. ಕಾಟೇರ ಸಿನಿಮಾ ಕನ್ನಡದ ಸಿನಿಮಾ. ಪ್ಯಾನ್ ಇಂಡಿಯಾ ಕಾಲದಲ್ಲಿ ಕನ್ನಡದಲ್ಲಿ ರಿಲೀಸ್ ಆಗಿ ಗೆದ್ದಂತ ಸಿನಿಮಾ ಕಾಟೇರ. ವಿದೇಶಗಳಲ್ಲೂ ಈಗ ಸದ್ದು ಮಾಡಯತ್ತಿದೆ. ಬಾಕ್ಸ್ ಆಫೀಸ್ ಸುಲ್ತಾನನ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...