Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ : ಸಿಎಂ ಸಿದ್ದರಾಮಯ್ಯ ಹಿಂಗ್ಯಾಕಂದ್ರು..?

---Advertisement---

ಚಾಮರಾಜನಗರ: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ವಿಚಾರ ಸಿಕ್ಕಾಪಟ್ಟೆ ಚರ್ಚೆಯಾಗುತ್ತಲೆ ಇದೆ. ಅರ್ಧ ವರ್ಷವಷ್ಟೇ ಸಿಎಂ ಅಂತೆಲ್ಲಾ ಚರ್ಚೆಯಾಗುತ್ತಿದೆ. ಇದರ ಜೊತೆಗೆ ಮೂಡಾ ಹಗರಣ ಕೋರ್ಟ್ ನಲ್ಲಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯದ ಕೊನೆಗಾಲದ ಬಗ್ಗೆ ಮಾತನಾಡಿರುವುದು ಆಶ್ಚರ್ಯ ತರಿಸಿದೆ.

ಇಂದು ಚಾಮರಾಜನಗರ ಜಿಲ್ಲೆಯ ಸತ್ತೇಗಾಲದ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಲು ಹೋಗಿದ್ದರು‌. ಈ ಶಾಲೆಯನ್ನು ಹಳೆಯ ವಿದ್ಯಾರ್ಥಿಯಾಗಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಮರಿಸ್ವಾಮಿ ನೇತೃತ್ವದಲ್ಲಿ ಹಳೆಯ ವಿದ್ಯಾರ್ಥಿಗಳು ಸೇರಿ ಶಾಲಾ ಕಟ್ಟಡವನ್ನು ನಿರ್ಮಾಣ ಮಾಡಿಸಿದ್ದಾರೆ. ಈ ಕಟ್ಟಡದ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ‌. ಉದ್ಘಾಟನೆಯ ಬಳಿಕ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತೀರಿ ಎಂದಿದ್ದರು. ಜೆ.ಹೆಚ್.ಪಟೇಲರಿಗೆ ಆಗಿನ ಕಾಲದ ಕೆಲವು ಶಾಸಕರು ಹೇಳಿದ್ದರು. ಆಗಿನಿಂದ ಆ ಕಳಂಕ ಚಾಮರಾಜನಗರದ ಮೇಲಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಚಾಮರಾಜನಗರಕ್ಕೆ ಬಂದಿದ್ದೇನೆ. ಈ ಮೂಢ ನಂಬಿಕೆಯನ್ನು ಅವರು ನಂಬಿರಲಿಲ್ಲ, ನಾನು ನಂಬಿಲ್ಲ. ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆಯನ್ನು ಘೊಇಷಣೆ ಮಾಡಿದ್ದೆವು, ಆಗ ನಾನು ಉಪಮುಖ್ಯಮಂತ್ರಿಯಾಗಿದ್ದೆ.

ನಾನು ಏನಿಲ್ಲ ಅಂದರು ಚಾಮರಾಜನಗರಕ್ಕೆ 20 ಬಾರಿ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗೆಲ್ಲಾ ಖುರ್ಚಿ ಕಳೆದುಕೊಳ್ಳುವ ಬದಲು, ಸಿಎಂ ಖುರ್ಚಿ ಗಟ್ಟಿಯಾಗಿದೆ. ಅತ್ಯಮನತ ಉತ್ಸಾಹದಿಂದ ಶಾಲೆಯನ್ನು ಉದ್ಘಾಟನೆ ಮಾಡಿದ್ದೇನೆ. ಜಾನಪದ ಕಲೆಗಳ ತವರೂರು ಹಾಗೂ ದಕ್ಷಿಣ ಗಡಿ ಈ ಚಾಮರಾಜನಗರ ಎಂದು ಸಿಎಂ ಸಿದ್ದರಾಮಯ್ಯ ಅವರು ಕೊಂಡಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment