ನಾನು ಮುಸ್ಲಿಂ ಪರ ನಿಂತೆ.. ಆದರೆ ಅವರು : ಕುಮಾರಸ್ವಾಮಿ ಹೇಳಿದ್ದೇನು..?

1 Min Read

 

ಬೆಂಗಳೂರು: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಲೋಕಸಭೆಯನ್ನು ಎದುರಿಸಲು ಸಜ್ಜಾಗಿದೆ. ಆದರೆ ಈ ಮೈತ್ರಿಯನ್ನು ಮುಸ್ಲಿಂ ನಾಯಕರು ವಿರೋಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಮೈತ್ರಿ ನನಗಾಗಲೀ ಅಥವಾ ನನ್ನ ಕುಟುಂಬಕ್ಕಾಗಲೀ ಅಲ್ಲ. ರಾಜ್ಯದ ಜನರ ಹಿತಕ್ಕಾಗಿ. ವಿಜಯ ದಶಮಿಯಂದು ನಾವೂ ಎಲ್ಲವನ್ನು ಚರ್ಚಿಸುತ್ತೇವೆ. ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆಗೆ ಮಾತನಾಡಲು ಹಾಗೂ ಅವರ ರಾಜ್ಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ನಮಗೆ ಮುಖ್ಯವಾಗಿದೆ. ಅದಕ್ಕಾಗಿಯೇ ಜಂಟಿಯಾಗಿ ಮಾರ್ಗ ನಕ್ಷೆ ರೂಪಿಸುತ್ತೇವೆ. ರಾಜ್ಯದಲ್ಲಿ ಜಂಟಿ ಪ್ರತಿಪಕ್ಷವಾಗಿ ಕೆಲಸ ಮಾಡುತ್ತೇವೆ. ಯಾವುದೇ ಕಾರ್ಯಾಚರಣೆಯ ಅಗತ್ಯವಿಲ್ಲ. ಹೆಚ್ಚಿನ ಉಪಮುಖ್ಯಮಂತ್ರಿಗಳ ವಿಚಾರ ಸದ್ದಾಗುತ್ತಿರುವುದನ್ನು ಗಮನಿಸಿದರೆ ಸರ್ಕಾರ ಅಸ್ಥಿರವಾಗಿದೆ ಎಂಬುದು ಇದರಿಂದಾನೇ ತಿಳಿಯುತ್ತಿದೆ. ನಮ್ಮ ಕೈಯಲ್ಲಿ ಏನೂ ಇರುವುದಿಲ್ಲ. ಮಹಾರಾಷ್ಟ್ರದಲ್ಲಿ ಏನಾಯಿತು ಎಂದು ಯಾರೂ ನಿರೀಕ್ಷೆ ಮಾಡಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಇನ್ನು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯುತ್ತಿರುವ ಬಗ್ಗೆ ಮಾತನಾಡಿದ್ದು, ನಾನು ಈ ನಾಯಕರನ್ನು ಕೇಳಲು ಬಯಸುತ್ತೇನೆ. ಪಕ್ಷಕ್ಕೆ ಇವರ ಕೊಡುಗೆ ಏನು..? ಅವರು ನಿರ್ಗಮನಕ್ಕೆ ಮೈತ್ರಿಯನ್ನು ಕಾರಣವೆಂದು ಹೇಳುತ್ತಿದ್ದಾರೆ. ಹೆಚ್ ಡಿ ದೇವೇಗೌಡ ಅವರು ಈ ಸಮುದಾಯಕ್ಕೆ ಶೇ. 4 ರಷ್ಟು ಮೀಸಲಾತಿ ನೀಡಿದ್ದಾರೆ. ಅವರ ವಿರುದ್ಧ ಘಟಾನುಘಟಿಗಳು ನಿಂತಾಗ, ಕಾಂಗ್ರೆಸ್ ಮೌನವಾಗಿದ್ದಾಗ ಅವರ ಪರವಾಗಿ ನಿಂತಿದ್ದು ನಾವೂ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks