Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಮುಸ್ಲಿಂ ಪರ ನಿಂತೆ.. ಆದರೆ ಅವರು : ಕುಮಾರಸ್ವಾಮಿ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಲೋಕಸಭೆಯನ್ನು ಎದುರಿಸಲು ಸಜ್ಜಾಗಿದೆ. ಆದರೆ ಈ ಮೈತ್ರಿಯನ್ನು ಮುಸ್ಲಿಂ ನಾಯಕರು ವಿರೋಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಮೈತ್ರಿ ನನಗಾಗಲೀ ಅಥವಾ ನನ್ನ ಕುಟುಂಬಕ್ಕಾಗಲೀ ಅಲ್ಲ. ರಾಜ್ಯದ ಜನರ ಹಿತಕ್ಕಾಗಿ. ವಿಜಯ ದಶಮಿಯಂದು ನಾವೂ ಎಲ್ಲವನ್ನು ಚರ್ಚಿಸುತ್ತೇವೆ. ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆಗೆ ಮಾತನಾಡಲು ಹಾಗೂ ಅವರ ರಾಜ್ಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ನಮಗೆ ಮುಖ್ಯವಾಗಿದೆ. ಅದಕ್ಕಾಗಿಯೇ ಜಂಟಿಯಾಗಿ ಮಾರ್ಗ ನಕ್ಷೆ ರೂಪಿಸುತ್ತೇವೆ. ರಾಜ್ಯದಲ್ಲಿ ಜಂಟಿ ಪ್ರತಿಪಕ್ಷವಾಗಿ ಕೆಲಸ ಮಾಡುತ್ತೇವೆ. ಯಾವುದೇ ಕಾರ್ಯಾಚರಣೆಯ ಅಗತ್ಯವಿಲ್ಲ. ಹೆಚ್ಚಿನ ಉಪಮುಖ್ಯಮಂತ್ರಿಗಳ ವಿಚಾರ ಸದ್ದಾಗುತ್ತಿರುವುದನ್ನು ಗಮನಿಸಿದರೆ ಸರ್ಕಾರ ಅಸ್ಥಿರವಾಗಿದೆ ಎಂಬುದು ಇದರಿಂದಾನೇ ತಿಳಿಯುತ್ತಿದೆ. ನಮ್ಮ ಕೈಯಲ್ಲಿ ಏನೂ ಇರುವುದಿಲ್ಲ. ಮಹಾರಾಷ್ಟ್ರದಲ್ಲಿ ಏನಾಯಿತು ಎಂದು ಯಾರೂ ನಿರೀಕ್ಷೆ ಮಾಡಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಇನ್ನು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯುತ್ತಿರುವ ಬಗ್ಗೆ ಮಾತನಾಡಿದ್ದು, ನಾನು ಈ ನಾಯಕರನ್ನು ಕೇಳಲು ಬಯಸುತ್ತೇನೆ. ಪಕ್ಷಕ್ಕೆ ಇವರ ಕೊಡುಗೆ ಏನು..? ಅವರು ನಿರ್ಗಮನಕ್ಕೆ ಮೈತ್ರಿಯನ್ನು ಕಾರಣವೆಂದು ಹೇಳುತ್ತಿದ್ದಾರೆ. ಹೆಚ್ ಡಿ ದೇವೇಗೌಡ ಅವರು ಈ ಸಮುದಾಯಕ್ಕೆ ಶೇ. 4 ರಷ್ಟು ಮೀಸಲಾತಿ ನೀಡಿದ್ದಾರೆ. ಅವರ ವಿರುದ್ಧ ಘಟಾನುಘಟಿಗಳು ನಿಂತಾಗ, ಕಾಂಗ್ರೆಸ್ ಮೌನವಾಗಿದ್ದಾಗ ಅವರ ಪರವಾಗಿ ನಿಂತಿದ್ದು ನಾವೂ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!