ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಗೆಲ್ಲುವುದಕ್ಕೆ ರೆಡಿಯಾಗಿದೆ. ಈ ಮೈತ್ರಿ ಎರಡು ಪಕ್ಷದಲ್ಲಿಯೂ ಹಲವರಿಗೆ ಸಮಾಧಾನ ತರುತ್ತಿಲ್ಲ. ಅದರಲ್ಲೂ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ಅವರ ಬಳಿಯೂ ಯಾವುದೇ ಚರ್ಚೆ ನಡೆಸಿಲ್ಲ. ಅಂದಿನಿಂದ ಈ ಬಗ್ಗೆ ಮಾತನಾಡದ ಸಿ ಎಂ ಇಬ್ರಾಹಿಂ ಇಂದು ಮೈತ್ರಿ ಬಗ್ಗೆ ಮಾತನಾಡಿದ್ದಾರೆ.
ಅಕ್ಟೋಬರ್16 ರಂದು ಈ ಬಗ್ಗೆ ಮಾತನಾಡುವುದಕ್ಕೆ ನಿರ್ಧಾರ ಮಾಡಿದ್ದೇನೆ. ಅಲ್ಲಿಯವರೆಗೂ ಅವಕಾಶ ಮಾಡಿಕೊಡಿ. ಎಲ್ಲರ ಅಭಿಪ್ರಾಯ ಪಡೆದು ನಿರ್ಧಾರ ಮಾಡುತ್ತೇನೆ. ರಾಜ್ಯದ ವಿಷಯಗಳ ಬಗ್ಗೆ ಈಗಾಗಲೇ ಕುಮಾರಸ್ವಾಮಿ ಮಾತನಾಡಿದ್ದಾರೆ. ನಾನೊಂದು ಪಕ್ಷದ ಅಧ್ಯಕ್ಷ. ನೀವೂ ದೆಹಲಿಗೆ ಹೋಗಿದ್ದೀರಿ. ಆದರೆ ಅಲ್ಲಿ ಏನು ಚರ್ಚೆ ಮಾಡಿದ್ದೀರಿ, ಎಂಬ ಬಗ್ಗೆ ನನಗೆ ಒಂದು ಮಾತನ್ನು ಹೇಳಿಲ್ಲ. ಮೈತ್ರಿ ಎಲ್ಲಿ ಆಗಿದೆ, ಏನು ಚರ್ಚೆ ಮಾಡಿದ್ದಾರೆ ಎಂಬ ಯಾವ ಮಾಹಿತಿಯೂ ಇಲ್ಲ ಎಂದಿದ್ದಾರೆ.
ಜನತಾದಳದ ಮೂಲ ಮತಗಳು ಈ ಬಾರಿ ಕಾಂಗ್ರೆಸ್ಗೆ ಹೋಗಿದೆ. ಅದನ್ನು ಒಪ್ಪಲು ತಯಾರಿಲ್ಲ, ಅದನ್ನು ಒಪ್ಪಿಕೊಳ್ಳಿ. ಪಕ್ಷದಲ್ಲಿ ಚರ್ಚೆ ಆಗಿ ನಿರ್ಣಯ ಆದ ಮೇಲೆ ರಾಜ್ಯಾಧ್ಯಕ್ಷನಾಗಿ ನಾನು ಸಹಿ ಹಾಕಬೇಕು. ಕೋರ್ ಕಮಿಟಿ ಪ್ರವಾಸ ಶುರು ಮಾಡಿಲ್ಲ, ಆಗಲೇ ಹೋಗಿ ಭೇಟಿ ಮಾಡಿ ಬಂದಿದ್ದಾರೆ ಎಂದು ಕುಮಾರಸ್ವಾಮಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















