Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನೇ ನಿಜವಾದ ವಿರೋಧ ಪಕ್ಷದ ನಾಯಕ : ಯತ್ನಾಳ್

---Advertisement---

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಬ್ಬರಿಸಿದ್ದಾರೆ. ನಾನೇ ವಿರೋಧ ಪಕ್ಷದ ನಾಯಕ ಎಂದು ಅಬ್ಬರಿಸಿದ್ದಾರೆ. ವಿಧಾನಸಭೆಯಲ್ಲಿ ಕುರ್ಚಿ ಬದಲಿಸಿದ್ದಕ್ಕೆ ಗರಂ ಆದ ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್, ನಾವೆಲ್ಲರೂ ಹಿರಿಯ ಶಾಸಕರು, ಆದರೆ ನಮ್ಮನ್ನು ಹಿಂದಕ್ಕೆ ಹಾಕಿದ್ದೀರಾ. ಇದು ಯಾವ ನ್ಯಾಯ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ಶಾಸಕ ರಂಗನಾಥ್ ಮಾತನಾಡಿ, ಯತ್ನಾಳ್ ಅವರನ್ನ ಬಿಜೆಪಿಯವರು ಅನಾಥರನ್ನಾಗಿ ಮಾಡಿದ್ದಾರೆ. ಅವರ ಜೊತೆ ನಾವು ನಿಲ್ಲುತ್ತೇವೆ ಎಂದು ಕಾಲೆಳೆದರು.

ಇದೆ ವೇಳೆ ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿ, ರಾಜಕೀಯದಲ್ಲಿ ಸೀನಿಯರ್, ಜೂನಿಯರ್ ಅಂತಿಲ್ಲ. ಅಧಿಕಾರದಲ್ಲಿದ್ದಾಗ ಸೀನಿಯರ್, ಇಲ್ಲದಿದ್ದಾಗ ಜೂನಿಯರ್, ಶಾಸಕರ ಸಂಖ್ಯಾಬಲ ನೋಡಿಕೊಂಡು ಸೀಟು ಕೊಡೋದು. ನಿಮಗೆ ಬೇಕಾದಾಗ ಇಲ್ಲಿ ಇರುತ್ತೀರಾ, ಬೇಡ ಅಂದಾಗ ಅಲ್ಲಿಗೆ ಹೋಗ್ತೀರಿ ಎಂದರು. ಬಳಿಕ ಮಾತನಾಡಿದ ಯತ್ನಾಳ್, ಬೇಕಾದಾಗ ಅಂತ ಅಲ್ಲ ನಾನೊಬ್ಬ ನಿಷ್ಠಾವಂತ ಕಾರ್ಯಕರ್ತ. ಈ ಸದನದಲ್ಲಿ ನಿಜವಾದ ವಿರೋಧ ಪಕ್ಷದ ನಾಯಕ ಅಂದರೆ ನಾನೇ. ನಾನು ಅಡ್ಜೆಸ್ಟ್ಮೆಂಟ್ ರಾಜಕಾರಣಿ ಅಲ್ಲ. ನಾನೇನು ಸಿಎಂ ಮನೆಗೆ ಹೋಗಿಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಎದುರಲ್ಲೇ ನಾನೇ ನಿಜವಾದ ವಿರೋಧ ಪಕ್ಷದ ನಾಯಕ ಎಂದು ಟಾಂಗ್ ಕೊಟ್ಟರು.

ಒಟ್ಟಾರೆ ಇಂದಿನ ಸದನದಲ್ಲಿ ವಿರೋಧ ಪಕ್ಷದ ನಾಯಕನ ಬಗ್ಗೆಯೇ ಜೋರು ಚರ್ಚೆಯಾಗಿದೆ. ಸದ್ಯ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಅವರು ಇದ್ದಾರೆ. ಆಡಳಿತ ಪಕ್ಷವನ್ನು ಎಲ್ಲಾ ವಿಚಾರದಲ್ಲೂ ತರಾಟೆ ತೆಗೆದುಕೊಳ್ಳುತ್ತಾರೆ. ಇದೀಗ ಶಾಸಕ ಯತ್ನಾಳ್ ಅವರು ನಾನೇ ವಿರೋಧ ಪಕ್ಷದ ನಾಯಕ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...