Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರಿನ ಕೆಲ ಮುಖಂಡರು ನನ್ನ ಬಲಿಪಶು ಮಾಡಿದರು ಅಂತ ಹೇಳಲ್ಲ : ದೇವೇಗೌಡರು ಕಣ್ಣೀರಾಕಿದ್ದೇಕೆ..?

Facebook
Twitter
Telegram
WhatsApp

ತುಮಕೂರು : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಾ ಇದೆ. ರಾಜ್ಯದ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಜೆಡಿಎಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಬೇಕೆಂದುಕೊಂಡಿರುವ ಮಾಜಿ ಪ್ರಧಾನಿ ದೇವೇಗೌಡ ಅವರು ಇಂದು ತುಮಕೂರಿನಲ್ಲಿ ಪ್ರಚಾರ ನಡೆಸಿದ್ದಾರೆ. ಮಧುಗಿರಿಯ ಕೈಮರದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ದೇವೇಗೌಡ ಅವರು ಭಾಗಿಯಾಗಿದ್ದರು.

ಈ ವೇಳೆ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನ ಕೆಲ ಮುಖಂಡರಿಂದಾದ ನೋವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು. ನಾನು ಹಿಂದಿನ ಸಂಗತಿಗಳನ್ನು ಮೆಲುಕು ಹಾಕಿ ನೋಡುವುದಕ್ಕೆ ಹೋಗಲ್ಲ. ಚುನಾವಣಾ ರಾಜಕೀಯ ಸಾಕಾಗಿದೆ ಎಂದು ಈ ಹಿಂದೆಯೇ ಹೇಳಿದ್ದೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಅಂದುಕೊಂಡಿರಲಿಲ್ಲ. ಆದರೆ ತುಮಕೂರಿನ ಕೆಲ ಮುಖಂಡರು ನನ್ನನ್ನು ಬಲಿಪಶು ಮಾಡಿದರು ಎಂದು ಬೇಸರ ಹೊರ ಹಾಕಿದರು.

ಇನ್ನು ಮಧುಗಿರಿ ಅಭ್ಯರ್ಥಿ ವೀರಭದ್ರಯ್ಯ ಅವರ ಪರವಾಗಿ ಮತಯಾಚನೆ ಮಾಡಿದರು. ವೀರಭದ್ರಯ್ಯ ಅವರು ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಮಧುಗಿರಿ ಕೂಡ ಒಂದು ಜಿಲ್ಲೆಯಾಗಬೇಕು ಎಂಬುದು ಅವರ ಕನಸು. ಏಕಶಿಲಾ ಬೆಟ್ಟ ಪ್ರವಾಸಿ ತಾಣವಾಗಬೇಕೆಂದು ಕನಸು ಕಂಡಿದ್ದಾರೆ. ಅವರಿಗೆ ನಿಮ್ಮ ಮತ ನೀಡಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!