Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆತ್ಮಸಾಕ್ಷಿಗೆ ವಿರುದ್ದವಾಗಿ ನಡೆದುಕೊಂಡಿಲ್ಲ, ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ : ಶ್ರೀಮತಿ ಎಂ.ಪ್ರೇಮಾವತಿ ಮನಗೋಳಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಆ.06) : ಆತ್ಮಸಾಕ್ಷಿಗೆ ವಿರುದ್ದವಾಗಿ ನಡೆದುಕೊಂಡಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿರುವ ತೃಪ್ತಿಯಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿರುವ ಶ್ರೀಮತಿ ಎಂ.ಪ್ರೇಮಾವತಿ ಮನಗೋಳಿ ತಮ್ಮ ಅನಿಸಿಕೆ ಹಂಚಿಕೊಂಡರು.

ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನದಲ್ಲಿ ಶನಿವಾರ ವಕೀಲರ ಸಂಘದಿಂದ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದರು.

ಮೇ.15, 2020 ರಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡೆ. ಆಗ ಕೋವಿಡ್ ಇದ್ದ ಕಾರಣ ಸ್ವಲ್ಪ ಅಡಚಣೆಯಾಯಿತು.  ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದರಿಂದ ಕೆಲಸದ ಕಡೆ ಹೆಚ್ಚು ಗಮನ ಕೊಡಲು ಆಗಲಿಲ್ಲ. ವಕೀಲರ ಭವನ ನವೀಕರಣಕ್ಕೆ ಪ್ರಸ್ತಾವನೆ ಹೋಗಿದೆ. ಚಿತ್ರದುರ್ಗದಲ್ಲಿಯೇ ನಿವೃತ್ತಿಯಾಗಬೇಕೆಂಬ ಆಸೆಯಿತ್ತು. ಅದು ಈಡೇರಿತು. ನನ್ನ ಅಧಿಕಾರವಧಿಯಲ್ಲಿ ವಕೀಲರ ಸಂಪೂರ್ಣ ಸಹಕಾರವು ಸಿಕ್ಕಿತು ಎಂದು ನೆನಪಿಸಿಕೊಂಡರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಬಿ.ಎಸ್.ರೇಖ ಬೀಳ್ಕೊಡುಗೆ ಹಾಗೂ ನೂತನ ನ್ಯಾಯಾಧೀಶರುಗಳ ಸ್ವಾಗತ ಸಮಾರಂಭ ಉದ್ಗಾಟಿಸಿ ಮಾತನಾಡುತ್ತ ನ್ಯಾಯಾಂಗ ಇಲಾಖೆಯಲ್ಲಿ ಯಾವುದೆ ಸಮಸ್ಯೆ, ತೊಂದರೆಯಿಲ್ಲದಂತೆ ಕೆಲಸ ಮಾಡಿ ನಿವೃತ್ತಿಯಾಗುವುದೆಂದರೆ ಕಷ್ಟ. ಶ್ರೀಮತಿ ಪ್ರೇಮಾವತಿ ಮನಗೋಳಿರವರು ತಾವಾಯಿತು ತಮ್ಮ ಕೆಲಸವಾಯಿತು ಎನ್ನುವಂತಿದ್ದರು. ಯಾರ ತಂಟೆಗೂ ಹೋದವರಲ್ಲ. ಸರ್ಕಾರಿ ನೌಕರಿಯಲ್ಲಿ ವರ್ಗಾವಣೆ, ನಿವೃತ್ತಿ ಅನಿವಾರ್ಯ. ಹಾಗಾಗಿ ನಿವೃತ್ತಿ ಜೀವನ ಪ್ರೇಮಾವತಿ ಮನಗೋಳಿರವರಿಗೆ ನೆಮ್ಮದಿಯಾಗಿರಲಿ ಎಂದು ಹಾರೈಸಿದರು.
ಅಪರ ಜಿಲ್ಲಾ ನ್ಯಾಯಾಧೀಶರಾಗಿ ನಿವೃತ್ತಿಯಾದ ಬಸವರಾಜ್ ಚಗರೆಡ್ಡಿರವರಿಗೂ ಬೀಳ್ಕೊಡಲಾಯಿತು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ.ಅನಿಲ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಸಹ ಕಾರ್ಯದರ್ಶಿ ಗಿರೀಶ್ ಬಿ.ಮಲ್ಲಾಪುರ, ಖಜಾಂಚಿ ಪ್ರದೀಪ್ ಬಿ.ಇ. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆಂಪರಾಜು ವೇದಿಕೆಯಲ್ಲಿದ್ದರು.

ಪ್ರಧಾನ ಸಿವಿಲ್ ನ್ಯಾಧೀಶರಾದ ನೇಮಿಚಂದ್, ಅಪರ ನ್ಯಾಯಾಧೀಶರಾದ ಶ್ರೀಮತಿ ಅನಿತ ಕುಮಾರಿ, ಅಪರ ಸಿವಿಲ್ ನ್ಯಾಯಾಧೀಶರಾದ ಆರ್.ಸಹನ, ಒಂದನೆ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಚೈತ್ರ ಹಾಗೂ ನೂರಾರು ವಕೀಲರು ಬೀಳ್ಕೊಡುಗೆ ಸಮಾರಂಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment