Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಂಗೆ ಹೇರ್ ಕಟ್ ಮಾಡೋರು ಫ್ರೀ ಇಲ್ಲ.. ವಿಜಯೇಂದ್ರ ಬಂದು ಮಾಡಲಿ : ಮಧು ಬಂಗಾರಪ್ಪ ವ್ಯಂಗ್ಯ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಮೇ.27  : ನನ್ನ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ನನ್ನ ಹೇರ್ ಕಟ್ ಮಾಡುವವರು ಫ್ರೀ ಇಲ್ಲ. ವಿಜಯೇಂದ್ರ ಫ್ರೀ ಇದ್ದರೆ ಬಂದು ಹೇರ್ ಕಟ್ ಮಾಡಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

 

ಚಿತ್ರದುರ್ಗಕ್ಕೆ ಬರುವ ಮಧು ಬಂಗಾರಪ್ಪ ಅವರು ಕಟಿಂಗ್ ಮಾಡಿಸಿಕೊಂಡು, ತಲೆಗೆ ಎಣ್ಣೆ ಹಚ್ಚಿಕೊಂಡು, ತಲೆ ಬಾಚಿಕೊಂಡು ಚಿತ್ರದುರ್ಗಕ್ಕೆ ಬರಲಿ ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದರು. ಇದಕ್ಕೆ ಗೆಂ ಆದ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ಜೂನ್ 4ರಂದು ಅವರ ಹಣೆ ಬರಹ ಅವರು ನೋಡಿಕೊಳ್ಳಲಿ. ನನ್ನ ಹಣೆ ಬರಹ ನಾವು ನೋಡಿಕೊಳ್ತೇವೆ. ಇಷ್ಟು ವರ್ಷ ಅವರು ಹೊಲಸು ಮಾಡಿದ್ದನ್ನ ನಾವು ಸರಿ ಮಾಡುತ್ತಿದ್ದೇವೆ. ಪಠ್ಯ ಪುಸ್ತಕ ಪರಿಷ್ಕರಣೆ ಪ್ರಣಾಳಿಕೆಯಲ್ಲೂ ಹಾಕಿ ಮಾಡಿದ್ದೇವೆ. ಇವರ ಹಣೆ ಬರಹಕ್ಕೆ ಶಿಕ್ಷಕರ ನೇಮಕಾತಿ ಮಾಡಲು ಆಗಿಲ್ಲ, ನಾವು ಬಂದ ಬಳಿಕ ನೇಮಕಾತಿ ಮಾಡಿದ್ದೇವೆ. ಶಿಕ್ಷಣದ ಪವಿತ್ರತೆ ಕೂಡಾ ಕಾಂಗ್ರೆಸ್ ಪಕ್ಷ ಕಾಪಾಡಿದೆ. ಮಕ್ಕಳ ಹಿತ ದೃಷ್ಟಿಯಿಂದ ಕೆಲ ನಿರ್ಧಾರ ಮಾಡಿದ್ದೇವೆ. ಮಾಜಿ ಮಂತ್ರಿ ಎನ್. ಮಹೇಶ್ ಪಠ್ಯದಲ್ಲಿ ಕೆಟ್ಟ ಬುದ್ದಿ ಹಾಕಿದ್ದರು. ಕೆಲ ವೇಳೆ ನನಗೆ ಕನ್ನಡ ಶಬ್ದ ಕಷ್ಟ ಆಗಿದೆ, ಟ್ರೋಲ್ ಮಾಡೊದ್ರಿಂದ ಅವರಿಗೆ ಹೊಟ್ಟೆ ತುಂಬುತ್ತೆ. ನಮ್ಮ ಪಠ್ಯ ಪುಸ್ತಕ ಶುದ್ದಿಯಾಗಿ, ಪರಿಷ್ಕರಣೆ ಮಾಡಲಾಗಿದೆ. ಟೀಕೆ ಟಿಪ್ಪಣಿಯೇ ಇಲ್ಲವೂ ಅಲ್ಲ ಚಿತ್ರ ಮಂದಿರಕ್ಕೆ ಹೋಗಿ ಸಿನಿಮಾ ಪುಕ್ಸಟೆ ನೋಡಿ ಮಜಾ ಮಾಡ್ತಾರೆ, ವಿರೋಧ ಪಕ್ಷದಲ್ಲಿ ಇದ್ದು ಟೀಕೆ ಟಿಪ್ಪಣಿ ಮಾಡಬಾರ್ದು. ಉತ್ತಮ ಕೆಲಸ ಮಾಡಿದಾಗ ದ್ವನಿ ಕೊಡಬೇಕು. ನಮ್ಮ ಸರ್ಕಾರ ಬಂದಿದ್ದು ಅವರಿಗೆ ಹೊಟ್ಟೆ ಉರಿಯಾಗಿದೆ ಎಂದರು.

 

ಇದೆ ವೇಳೆ ವಿಜಯೇಂದ್ರ ಮಾತಿಗೆ ತಿರುಗೇಟು ನೀಡಿ, ನನ್ನ ಹೇರ್ ಕಟ್ ಮಾಡೋರು ಫ್ರೀ ಇಲ್ಲ. ವಿಜಯೇಂದ್ರ ಫ್ರೀ ಇದ್ರೆ ಬಂದು ಹೆರ್ ಕಟ್ಟಿಂಗ್ ಮಾಡಲಿ ಎಂದು ಲೇವಡಿ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್

ಸಿಎಂ ಪತ್ನಿ ಹೆಸರಿಗೆ 14 ಮೂಡಾ ಸೈಟ್ ಗಳು : ಸಿದ್ದರಾಮಯ್ಯ ಹೇಳಿದ್ದೇನು..?

  ಬೆಂಗಳೂರು: ಸಿಎಂ ಸಿದ್ದರಾಮಯ್ಯ ಧರ್ಮಪತ್ನಿ ಪಾರ್ವತಿ ಅವರ ಹೆಸರಿನಲ್ಲಿ 14 ಮೂಡಾ ಸೈಟುಗಳನ್ನು ಮಾಡಲಾಗಿದೆ ಎಂಬುದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಆರ್ಟಿಐ ಕಾರ್ಯಕರ್ತ ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದಿದ್ದಾರೆ. ಜೊತೆಗೆ ಸಿಎಂ

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೋಲೆ ಬಾಬಾರವರ ಸತ್ಸಂಗ

error: Content is protected !!