Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

Facebook
Twitter
Telegram
WhatsApp

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್ ಇತ್ತು. ಕಾಂಗ್ರೆಸ್ ನವರಿಗೂ ಕೊಟ್ಟಿದ್ದೀನಿ. ರಾಜಕೀಯವಾಗಿ ಯಾವಾಗ ಬಳಸಬೇಕೋ ಆಗ ಬಳಸುತ್ತೀನಿ ಎಂದಿದ್ದ ಎಂದಿದ್ದರು. ಇದೀಗ ಕಾರ್ತೀಕದ ವಿಡಿಯೋ ಮಾಡಿದ್ದು, ಆ ಪೆನ್ ಡ್ರೈವ್ ದೇವರಾಜೇಗೌಡರಿಗೆ ಮಾತ್ರ ಕೊಟ್ಟಿದ್ದೆ. ದೇವರಾಜೇಗೌಡ ಅದನ್ನ ಏನಕ್ಕೆ ಬಳಸಿಕೊಂಡ್ರೋ ಗೊತ್ತಿಲ್ಲ ಎಂದಿದ್ದಾರೆ.

ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿದ ಕಾರ್ತಿಕ್, ನಾನು 15 ವರ್ಷದಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಕಳೆದ ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ದರು. ಹಿಂಸೆ ಕೊಟ್ಟು ಹಲ್ಲೆ ಮಾಡಿದ್ದರಿಂದ ಅವರ ಮನೆಯಿಂದ ಹೊರಬಂದೆ. ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಹೆಚ್ ಡಿ ರೇವಣ್ಣ ಅವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೋ ಪ್ರಸಾರ ಮಾಡಬಾರದು ಅಂತ ಪ್ರಜ್ವಲ್ ದೇವರಾಜ್ ನನ್ನ ವಿರುದ್ಧ ಸ್ಟೇ ತಂದಿದ್ದರು. ಆಗ ದೇವರಾಜೇಗೌಡ ಅವರು ನಿನ್ನ ಬಳಿ ಇರುವ ವಿಡಿಯೋ ಹಾಗೂ ಫೋಟೋಗಳನ್ನು ನನಗೆ ಕೊಡು ಯಾರಿಗೂ ತೋರಿಸಲ್ಲ ಎಂದು ಹೇಳಿದ್ದರು. ನಾನು ಅದನ್ನು ನಂಬಿ ನನ್ನ ಬಳಿಯಿದ್ದ ಒಂದು ಕಾಪಿಯನ್ನು ಕೊಟ್ಟೆ.

ಅವರ ಸ್ಚಾರ್ಥಕ್ಕೆ ಅಶ್ಲೀಲ ವಿಡಿಯೋವನ್ನು ತನ್ನ ಸ್ವಾರ್ಥಕ್ಕೆ ಬಳಕೆ‌ ಮಾಡಿಕೊಂಡಿರುವುದು ಗೊತ್ತಿಲ್ಲ. ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ಅವರಿಗೆ ಬಿಟ್ಟರೆ ಬೇರೆ ಯಾರಿಗೂ ಆ ಪೆನ್ ಡ್ರೈವ್ ಕೊಟ್ಟಿಲ್ಲ. ಪೆನ್ ಡ್ರೈವ್ ಹಂಚಿದವರು ಯಾರೂ ಅಂತಾನೂ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡರ ಬಳಿ ಯಾಕೆ ಹೋಗ್ತಾ ಇದ್ದೆ. ದೇವರಾಜೇಗೌಡರು ಅದನ್ನು ಯಾಕೆ ಬಳಸಿಕೊಂಡರು ಗೊತ್ತಿಲ್ಲ ಎಂದಿದ್ದಾರೆ.

ಸದ್ಯ ಎಸ್ಐಟಿ ತನಿಖೆಗೆ ಕಾರ್ತಿಕ್ ಹಾಜರಾಗಿದ್ದಾರೆ. ಈ ಮೂಲಕ ಸತ್ಯ ಹೊರಗೆ ಬರುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

High Blood Pressure : ಅಧಿಕ ರಕ್ತದೊತ್ತಡ ಎಷ್ಟು ಅಪಾಯಕಾರಿ ಗೊತ್ತಾ ?

ಸುದ್ದಿಒನ್ : ಅಧಿಕ ರಕ್ತದೊತ್ತಡ ಎನ್ನುವುದು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಈ ಸಮಸ್ಯೆ ಇದ್ದರೆ ಪ್ರತಿದಿನ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು?

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು? ಮಂಗಳವಾರ ರಾಶಿ ಭವಿಷ್ಯ -ಮೇ-21,2024 ನರಸಿಂಹ ಜಯಂತಿ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!