Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಾನು ಗ್ಯಾರಂಟಿ ಕೊಡುತ್ತೇನೆ.. ಲೋಕಸಭೆ ಬಳಿಕ ಸರ್ಕಾರ ಬೀಳುತ್ತೆ : ಬಸವರಾಜ್ ಬೊಮ್ಮಾಯಿ

---Advertisement---

 

ಹಾವೇರಿ: ಲೋಕಸಭೆ ಚುನಾವಣೆಗೆ ಈಗಾಗಲೇ ಸಾಕಷ್ಟು ಸಿದ್ಧತೆ ನಡೆಯುತ್ತಿದೆ. ಇದರ ನಡುವೆ ಬಹಳ ದಿನಗಳ ಹಿಂದಿನಿಂದಲೂ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೇಳುತ್ತಲೆ ಬರುತ್ತಿದ್ದಾರೆ. 135 ಕ್ಷೇತ್ರಗಳಲ್ಲಿ ಚುನಾವಣೆ ಗೆದ್ದಿರುವ ಕಾಂಗ್ರೆಸ್ ಸರ್ಕಾರ ಬೀಳುವುದು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದಾರೆ.

ಇದೀಗ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೂಡ ಲೋಕಸಭೆ ಚುನಾವಣೆಯ ಬಳಿಕ ಸರ್ಕಾರ ಬೀಳಲಿದೆ ಎಂದೇ ಹೇಳಿದ್ದಾರೆ. ನಾನು ಗ್ಯಾರಂಟಿ ಕೊಡುತ್ತೇನೆ, ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರವೇ ಬರಲಿದೆ ಎಂದಿದ್ದಾರೆ.

 

ಸಿದ್ದರಾಮಯ್ಯ ಅವರು ರೈತರನ್ನು ಕಡೆಗಣಿಸಿದ್ದಾರೆ. ಹೀಗಾಗಿ ರೈತರ ಪಾಲಿಗೆ ಸರ್ಕಾರ ಸತ್ತು ಹೋಗಿದೆ. 200 ಯೂನಿಟ್ ವಿದ್ಯುತ್ ಯಾರಿಗೆ ಕೊಟ್ಟಿದ್ದೀರಿ. ಒಬ್ಬರ ಹೆಸರು ಹೇಳಿ ನೋಡೋಣಾ. ಗೃಹಲಕ್ಷ್ಮೀ ಯೋಜನೆಯ ಹಣ ಒಂದು ತಿಂಗಳು ಬಂದರೆ ಇನ್ನೊಂದು ತಿಂಗಳು ಬರುವುದಿಲ್ಲ. ಗ್ಯಾರಂಟಿ ಕೊಡುವುದರಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಬರಗಾಲವಿದ್ದರು, ರೈತರಿಗೆ ಕರೆಂಟ್ ಕೊಡುತ್ತಿಲ್ಲ. ಒಂದು ಕೈನಲ್ಲಿ ಕೊಟ್ಟು ಹತ್ತು ಕೈನಲ್ಲಿ ತೆಗೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಆರ್ಥಿಕವಾಗಿ ಸಂಪೂರ್ಣವಾಗಿ ದಿವಾಳಿಯಾಗಿದೆ. ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಲಿ ನಡೆಸಿದ್ದಾರೆ.

ಈಗಾಗಲೇ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಸ್ವತಂತ್ರವಾಗಿಯೇ ಸ್ಪರ್ಧಿಸಲು ತಯಾರಿ ನಡೆಸಿದ್ದರೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಮೈತ್ರಿ‌ ಮಾಡಿಕೊಂಡು ಸ್ಪರ್ಧೆ ನಡೆಸಲು ಮುಂದಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...