Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲಾ ವರ್ಗದವರಿಗೂ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸಂಸ್ಥೆಯನ್ನು ಸ್ಥಾಪಿಸಿದ್ದೇನೆ : ಹೊಳಲ್ಕೆರೆ ಕ್ಷೇತ್ರದ ಶಾಸಕ ಡಾ. ಎಂ.ಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 19 : ಹಣಕ್ಕಾಗಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸದೆ ಸಮಾಜ ಸೇವೆಯನ್ನು ಮಾಡುವುದಕ್ಕೆ ಬಡವರು ಸಹ ಶಿಕ್ಷಣವನ್ನು ಕಲಿಯಲಿ ಎಂಬ ಉದ್ದೇಶದಿಂದ ಶಿಕ್ಷಣ ಸಂಸ್ಥೆಯನ್ನು ಸ್ಥಾಪನೆ ಮಾಡಿದ್ದೇನೆ ಎಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳು ಹೊಳಲ್ಕೆರೆ ಕ್ಷೇತ್ರದ ಶಾಸಕರಾದ ಡಾ.ಎಂ.ಚಂದ್ರಪ್ಪ ತಿಳಿಸಿದರು.

ನಗರದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಆವರಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆವರು, 1983ರಲ್ಲಿ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭ ಮಾಡಿ ಇಲ್ಲಿಯವರೆಗೂ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಶಿಕ್ಷಕರ ತರಬೇತಿ ಕಾಲೇಜು, ನರ್ಸಿಂಗ್ ಕಾಲೇಜು, ಫಾರ್ಮಸಿ ಕಾಲೇಜು ಹಾಗೂ ಆರ್ಯರ್ವೇದ ವೈದ್ಯಕೀಯ ಕಾಲೇಜನ್ನು ಪ್ರಾರಂಭ ಮಾಡಲಾಗಿದೆ. ಇದರಲ್ಲಿ ಸ್ವೇಟ್ ಮತ್ತು ಸಿಬಿಎಸ್‌ಸಿ ತರಗತಿಗಳನ್ನು ಸಹಾ ನಡೆಸಲಾಗುತ್ತಿದೆ ಎಂದರು.

1989ರಲ್ಲಿ ಈ ಕಟ್ಟಡದ ಜಾಗವನ್ನು ಪಡೆಯುವುದರ ಮೂಲಕ ನೂತನವಾಗಿ ಕಟ್ಟಡವನ್ನು ನಿರ್ಮಾಣ ಮಾಡಿ ಮಕ್ಕಳ ಕಲಿಗೆ ಅವಕಾಶವನ್ನು ಕಲ್ಪಿಸಲಾಯಿತು. ನನಗೆ ಬೆಂಗಳೂರಿನಲ್ಲಿಯೂ ಉತ್ತಮವಾದ ಜಾಗ ಸಿಕ್ಕಿತ್ತು ಅಲ್ಲಿಯೂ ಸಹಾ ಶಾಲೆಯನ್ನು ಪ್ರಾರಂಭ ಮಾಡುವಂತೆ ಹಲವಾರು ಜನತೆ ಹೇಳಿದ್ದರು ಆದರೆ ನನಗೆ ನನ್ನ ಊರು, ನನ್ನ ಜನ ಎಂಬ ಆಭಿಮಾನದಿಂದ ಇಲ್ಲಿಯ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕೆಂಬ ಉದ್ದೇಶದಿಂದ ಇಲ್ಲಿಯೇ ಶಾಲೆಯನ್ನು ಪ್ರಾರಂಭ ಮಾಡಿದೆ.

ನಾನು ಹಣವನ್ನು ಗಳಿಸಬೇಕೆಂಬ ಉದ್ದೇಶ ಇದಿದ್ದರೆ ಬೆಂಗಳೂರಿನಲ್ಲಿ ಶಾಲೆಯಲ್ಲಿ ಪ್ರಾರಂಭ ಮಾಡುತ್ತಿದ್ದೆ ಆದರೆ ನನಗೆ ನನ್ನ ಜಿಲ್ಲೆಯ ಮಕ್ಕಳು ಶಿಕ್ಷಣವನ್ನು ಪಡೆಯಬೇಕೆಂಬ ಉದ್ದೇಶದಿಂದ ನನ್ನ ಉರಿನಲ್ಲಿಯೇ ಶಾಲೆಯನ್ನು ಪ್ರಾರಂಭ ಮಾಡಿದೆ ಸೇವಾ ಮನೋಭಾವದಿಂದ ಈ ಕೆಲಸವನ್ನು ಮಾಡುತ್ತಿದ್ದೇನೆ ಹೊರೆತು ಹಣಕ್ಕಾಗಿ ಅಲ್ಲ ಎಂದು ಚಂದ್ರಪ್ಪ ತಿಳಿಸಿದರು.

ನನ್ನ ಶಿಕ್ಷಣ ಸಂಸ್ಥೆ ದಿನದಿಂದ ದಿನಕ್ಕೆ ಪ್ರಗತಿಯನ್ನು ಕಾಣುತ್ತಿದೆ. ದಾವಣಗೆರೆ ವಿವಿಯ ಬಿ.ಕಾಂ. ನಲ್ಲಿ ಪ್ರಥಮ ರ‍್ಯಾಂಕ್‌ನ್ನು ನಮ್ಮ ಶಾಲೆಯ ವಿದ್ಯಾರ್ಥಿ ಪಡೆದಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವುದರ ಮೂಲಕ 5000 ಮಕ್ಕಳು ನಮ್ಮ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಶಿಕ್ಷಕರು ಸೇರಿದಂತೆ 500 ರಿಂದ 600 ಜನ ಕೆಲಸ ಮಾಡುತ್ತಿದ್ದಾರೆ. ಎಲ್ಲರು ಸಹಾ ಕುಟುಂಬ ರೀತಿಯಲ್ಲಿ ಇದ್ದಾರೆ, ಒಂದೇ ಮನೆಯ ವಾತಾವರಣ ನಮ್ಮಲ್ಲಿ ಇದೆ. ವಿಶ್ವಾಸದಿಂದ ಕೆಲಸವನ್ನು ಮಾಡುತ್ತಿದ್ದಾರೆ. ನಮ್ಮ ಸಂಸ್ಥೆಯಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ. 40 ವರ್ಷ ಸುಧೀರ್ಘವಾಗಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ನಡೆಸಲಾಗಿದೆ. ಎಲ್ಲಾ ವರ್ಗದವರಿಗೂ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ್ದೇನೆ ಎಂದರು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಾದ ರಘುಚಂದನ್ ಮಾತನಾಡಿ, ನಮ್ಮ ಶಿಕ್ಷಣ ಸಂಸ್ಥೆಯ 40ನೇ ವರ್ಷದ ಅಂಗವಾಗಿ ಡಿ. 21 ರಿಂದ 24ರವರೆಗೆ ಡೆಸ್ಟಿನಿ-2023 ರೆಂದು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಡಿಸೆಂಬರ್ 21 ರ ಸಂಜೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯರಪ್ಪ  ನವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಚಿಕ್ಕಮಗಳೂರಿನ ಗೌರಿ ಗದ್ದೆಯ ಅವಧೂತ ಆಶ್ರಮದ ಶ್ರೀ ವಿನಯ ಗೂರೂಜಿ, ಜಿ.ಪಂ. ಸಿಇಓ ಸೋಮಶೇಖರ್, ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ, ಹೆಚ್ಚುವರಿ ಪೋಲಿಸ್ ಅಧಿಕಾರಿಗಳಾದ ಎಸ್.ಜೆ.ಕುಮಾರಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಾರದ ರವಿಶಂಕರ್ ರೆಡ್ಡಿ, ಭಾಗವಹಿಸಲಿದ್ದಾರೆ ಎಂದರು. 

ಡಿ. 21 ರಂದು ಹಾಸ್ಯ ಸಾಹಿತಿಗಳಾದ ಸುಧಾ ಬರಗೂರು, ಮಿಮಿಕ್ರಿ ಗೋಪಿ, ಪ್ರಹ್ಲಾದ್ ಜೋಷಿ ಹಾಗೂ ರಾಘವೇಂದ್ರ ಆಚಾರ್ ಭಾಗವಹಿಸಲಿದ್ದಾರೆ. ಡಿ.22 ರಂದು ಸಂಜೆ 6.30ಕ್ಕೆ ಹೆಸರಾಂತ ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ನ್‌ರವರಿಂದ ಸಂಗೀತ ಕಾರ್ಯಕ್ರಮ ಡಿ. 23ರಂದು ಚಂದನ್ ಶಟ್ಟಿಯವ ರಿಂದ ಸಂಗೀತ ಕಾರ್ಯಕ್ರಮ, ಡಿ. 24 ರಂದು ಡಿಜೆ ನೈಟ್ ಎಂಬ ಕಾರ್ಯಕ್ರಮ ನಡೆಯಲಿದೆ ಎಂದು ರಘುಚಂದನ್ ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!