Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮೀಣ ಭಾಗದ ರಸ್ತೆಗಳು, ಶಾಲೆಗಳು ಮತ್ತು ಅಂತರ್ಜಲ ಹೆಚ್ಚಿಸುವ ಕಡೆಗೆ ಹೆಚ್ಚಿನ ಗಮನ ನೀಡಿದ್ದೇನೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ, (ಜ.11) : ಗ್ರಾಮೀಣ ಭಾಗದ ರಸ್ತೆ ಮತ್ತು ಅಂತರ್ಜಲದ ಮಟ್ಟವನ್ನು ಹೆಚ್ಚಿಸುವ ಕೆಲಸಕ್ಕೆ ಹೆಚ್ಚು ಒತ್ತು ನೀಡಲಾಗಿದೆ  ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.

ತಾಲೂಕಿನ ಪ್ರಧಾನ ಮಂತ್ರಿ ಅವರ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ತೋಪುರಮಾಳಿಗೆಯಿಂದ ಎಣ್ಣೆಗೆರೆ ಮುಖ್ಯರಸ್ತೆ  ಕಾಮಗಾರಿಗೆ ಚಾಲನೆ  ನೀಡಿ ಮಾತನಾಡಿದರು.

ತೋಪರಮಾಳಿಗೆ ಯಿಂದ ಎಣ್ಣೆಗೆರೆ ವರೆಗೆ 35 ಲಕ್ಷ  ವೆಚ್ಚದಲ್ಲಿ ರಸ್ತೆ ಮಾಡಲಾಗುತ್ತಿದೆ. ರಸ್ತೆ ಕಾಮಗಾರಿ ಗುಣಮಟ್ಟದಿಂದ ಮಾಡಲು ಸೂಚಿಸಿದ್ದೇನೆ. ಈ ಭಾಗದಲ್ಲಿ  4 ಕೋಟಿ ವೆಚ್ಚದಲ್ಲಿ 4 ಬೃಹತ್ ಚಕ್ ಡ್ಯಾಂ ನಿರ್ಮಾಣ ಮಾಡಲಾಗಿದೆ. ನಮ್ಮ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಶಾಲೆಗಳು, ಅಂತರ್ಜಲ ಹೆಚ್ಚಿಸುವ ಕಡೆಗೆ ಹೆಚ್ಚಿನ ಗಮನ ನೀಡಿದ್ದೇನೆ. 75 ಭಾಗ ಹಳ್ಳಿಯಲ್ಲಿ ಸಿ.ಸಿ.ರಸ್ತೆಗಳ ನಿರ್ಮಣ ಮಾಡಲಾಗಿದೆ. ಅಲ್ಪ ಸ್ವಲ್ಪ ಹಳ್ಳಿಯಲ್ಲಿ ಮಾತ್ರ ರಸ್ತೆ ಮಾಡಬೇಕಿದೆ.  ಜನರಿಗೆ ಅಂತರ್ಜಲ ವೃದ್ದಿಯಾದರೆ ಬೊರವೆಲ್ ನಲ್ಲಿ ನೀರಿನ ಮಟ್ಟ ಹೆಚ್ಚಿ ಉತ್ತಮ ಮಳೆ ಬೆಳೆಯಬಹುದು.ಚೆಕ್ ಡ್ಯಾಂಗಳು ಎಲ್ಲಾ ಕಡೆಗಳಲ್ಲಿ ತುಂಬಿದ್ದು  ಸಂತಸ ಉಂಟು ಮಾಡಿದೆ.

ಕ್ಷೇತ್ರದಲ್ಲಿ ಶಾಲೆಗಳು ಅಭಿವೃದ್ಧಿಗೂ ಅನುದಾನ ನೀಡಿದ್ದು ಕಾಮಗಾರಿ ಪ್ರಗತಿಯಲ್ಲಿವೆ. ಖಾಸಗಿ ಶಾಲೆಗಳಿಗಿಂತ ಅಚ್ಚುಕಟ್ಟಾಗಿ ಕಟ್ಟಡ ನಿರ್ಮಿಸುವ ಮೂಲಕ ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆ ತರುವ ಕೆಲಸ ಮಾಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ  ಲಕ್ಷಾಂತರ ಹಣ ಕಟ್ಟಿ ಖಾಸಗಿ ಶಾಲೆಗೆ ಕಳಿಸುವ ಬದಲು ಉತ್ತಮವಾದ ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸಬೇಕು ಎಂಬ ಭಾವನೆಯಲ್ಲಿ ಪೋಷಕರು ಇದ್ದಾರೆ ಎಂದು ತಿಳಿಸಿದರು.

ಕೋವಿಡ್ ಮತ್ತು ಒಮಿಕ್ರಾನ್ ಬಗ್ಗೆ ಇರಲಿ ಎಚ್ಚರ: ಕೋವಿಡ್ ಹೆಚ್ಚುತ್ತಿದ್ದ ತಮ್ಮ ಪ್ರಾಣ ತಮ್ಮ ಕೈಯಲ್ಲಿದೆ.ಯಾರು ಸಹ ಮಾಸ್ಕ್ , ಸ್ಯಾನಿಟೈಸರ್ ಕಡ್ಡಾಯವಾಗಿ  ಬಳಸಿ ಎಂದರು. ಎಲ್ಲಾರಿಗೂ ಸಹ ತನ್ನದೇ ಆದ ಕುಟುಂಬಗಳಿದ್ದು ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಿಎಂಜಿಎಸ್ ವೈ ನಾಗರಾಜು, ಗುತ್ತಿಗೆದಾರ ಎಟಿಎಸ್ ತಿಪ್ಪೇಸ್ವಾಮಿ,  ಗ್ರಾಮ ಪಂಚಾಯತಿ ಅಧ್ಯಕ್ಷ ಬೋಸಣ್ಣ, ಸದಸ್ಯರಾದ ಓಬಳೇಶ್,ವೆಂಕಟೇಶ್, ಬಿಜೆಪಿ   ಎಸ್ ಟಿ ಮೋರ್ಚಾ ಅಧ್ಯಕ್ಷ ಶಿವಪ್ರಸಾದ್. ಗ್ರಾಮದ ಮುಖಂಡರಾದ ನಾಗೇಂದ್ರ ರೆಡ್ಡಿ, ಸುರೇಶ್ ರೆಡ್ಡಿ, ಶಶಿಧರ ಮಾತು ಸುರೇಶ್ ರಾಜೇಶ್, ಮಾರುತಿ  ಗ್ರಾಮಸ್ಥರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

error: Content is protected !!