Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನೋಡುವಷ್ಟು ನೋಡಿದ್ದೇನೆ.. ಸಹಿಸುವಷ್ಟು ಸಹಿಸಿದ್ದೇನೆ : ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಹೇಳಿದ್ದೇನು..?

---Advertisement---

ಚೈತ್ರಾ ಹೆಸರು ಎಲ್ಲರೂ ಕೇಳಿಯೇ ಇರುತ್ತೀರಿ. ಒಳ್ಳೆಯ ವಾಗ್ಮೀಯಾಗಿ ಗುರುತಿಸಿಕೊಂಡವರು. ಹಿಂದುತ್ವದ ಬಗ್ಗೆ ಹೆಚ್ಚು ಭಾಷಣ ಮಾಡಿದ್ದವರು. ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದವರು. ಆ ಬಳಿಕ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುತ್ತೇನೆ ಎಂದು 7 ಕೋಟಿ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಜೈಲಿಗೆ ಹೋಗಿ ಬಂದವರು. ಇದೀಗ ಬಿಗ್ ಬಾಸ್ ಮನೆಗೆ ಕಾಲಿಡುತ್ತಿದ್ದಾರೆ.

ಇಂದಿನಿಂದ ಬಿಗ್ ಬಾಸ್ ಕನ್ನಡ ಸೀಸನ್ 11ಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಚೈತ್ರಾ ಕೂಡ ಬಿಗ್ ಬಾಸ್ ಮನೆಗೆ ಆಯ್ಕೆಯಾಗಿದ್ದಾರೆ. ಅದಕ್ಕೂ ಮುನ್ನ ಕಲರ್ಸ್ ಕನ್ನಡ ಪ್ರೋಮೋ ಒಂದನ್ನು ಮಾಡಿಕೊಂಡಿದೆ. ಇಂದು ಕಲರ್ಸ್ ಕನ್ನಡದ ಸೋಷಿಯಲ್ ಮೀಡಿಯಾದಲ್ಲಿ ಆ ಪ್ರೋಮೋ ಬಿಟ್ಟಿದ್ದು, ಚೈತ್ರಾ, ತನ್ನ ಜೈಲುವಾಸದ ದಿನಗಳ ಬಗ್ಗೆ ಮಾತನಾಡಿದ್ದಾರೆ.

ನಾನು ಕೂಡ ನೋಡುವಷ್ಟು ನೋಡಿದ್ದೇನೆ. ಸಹಿಸುವಷ್ಟು ಸಹಿಸಿದ್ದೇವೆ. ಇದು ನಿನಗೆ ಕೊನೆಯ ಎಚ್ಚರಿಕೆ. ನಾನು ಸಾಮಾನ್ಯ ಹಾಲು ಮಾರುವವನ ಮಗಳು. ಹಿಂದುತ್ವ ನನ್ನ ರಕ್ತದಲ್ಲಿಯೇ ಇದೆ. ನನ್ನನ್ನು ಗಟ್ಟಿ ಮಾಡಿರುವುದೇ ವಿರೋಧಿಗಳು. ನಾನು ಅರೆಸ್ಟ್ ಆಗಿದ್ದಾಗ ನನ್ನನ್ನು ನೋಡಲು ಉತ್ತರ ಕರ್ನಾಟಕದಿಂದ ಜನ ಬಂದಿದ್ದರು. ಅವರಿಗೆಲ್ಲಾ ನಾನು ಚಿರೃಣಿ. ಕೋರ್ಟ್, ಕೇಸ್ ಎಲ್ಲವನ್ನು ಎದುರಿಸುತ್ತಿದ್ದೇನೆ. ಇವೆಲ್ಲವೂ ನನ್ನನ್ನು ಕುಗ್ಗಿಸುವುದಿಲ್ಲ. ನಾನು ಜೈಲಿನಿಂದ ಹೊರ ಬಂದಾಗಲೇ ಬಿಗ್ ಬಾಸ್ ಬಗ್ಗೆ ಕೇಳಿದ್ದೆ. ನನಗೆ ಬಿಗ್ ಬಾಸ್ ಟೀಂನಿಂದ ಕಾಲ್ ಬಂದಾಗ ಗೊಂದಲದಲ್ಲಿದ್ದೆ. ಬಳಿಕ ಅವರು ಒಪ್ಪಿಸಿದ್ದು ಖುಷಿಯಾಯ್ತು ಎಂದು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...