Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ಷೇತ್ರದ ಜನ ಸಂತೋಷವಾಗಿರಲು ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ : ಶಾಸಕ ಡಾ.ಎಂ.ಚಂದ್ರಪ್ಪ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಹೊಳಲ್ಕೆರೆ : ರೈತರ ಅಡಿಕೆ ತೋಟಗಳನ್ನು ಉಳಿಸುವುದಕ್ಕಾಗಿ ಕ್ಷೇತ್ರದ 493 ಹಳ್ಳಿಗಳಲ್ಲಿ ಕೆರೆ ಕಟ್ಟೆ ಚೆಕ್‍ಡ್ಯಾಂಗಳನ್ನು ನಿರ್ಮಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕೆರೆ ಕೋಡಿ ಬಿದ್ದಿರುವುದರಿಂದ ಭಾನುವಾರ ಬಾಗಿನ ಅರ್ಪಿಸಿ ಮಾತನಾಡಿದರು.

ಹತ್ತು ಲಕ್ಷ ರೂ.ಗಳನ್ನು ಕೊಟ್ಟಿದ್ದೇನೆ. ಹಂತ ಹಂತವಾಗಿ ಇನ್ನು ಅನುದಾನ ನೀಡುತ್ತೇನೆ. ಕ್ಷೇತ್ರಾದ್ಯಂತ ಮನೆ ಮನೆಗೆ ಬಿಸ್ಲರಿಗಿಂತ ಶುದ್ದವಾದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿ ವಿಲಾಸ ಸಾಗರದಿಂದ ನೀರು ತರಲಾಗುವುದು. ಮೂವತ್ತು ವರ್ಷಗಳಿಂದಲೂ ರಾಜಕಾರಣ ಮಾಡುತ್ತಿದ್ದೇನೆ. ಯಾರಿಂದಲೂ ಏನನ್ನು ಹೇಳಿಸಿಕೊಳ್ಳದೆ ಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದರು.

ಮಲ್ಲಾಡಿಹಳ್ಳಿ ಸಮೀಪ ಭದ್ರವಾದ ಬ್ರಿಡ್ಜ್ ಕಟ್ಟಿಸಿದ್ದೇನೆ. ಕ್ಷೇತ್ರದ ಜನ ಎಲ್ಲರೂ ಸಂತೋಷವಾಗಿರಬೇಕೆಂಬುದು ನನ್ನ ಉದ್ದೇಶ. ಭದ್ರಾ ಪ್ರಾಜೆಕ್ಟ್ ನೀರನ್ನು ಹಿರಿಯೂರಿನ ವಾಣಿವಿಲಾಸಸಾಗರಕ್ಕೆ ಹರಿಸುತ್ತಿರುವುದರಿಂದ ಎಂದಿಗೂ ಅಲ್ಲಿ ನೀರು ಖಾಲಿಯಾಗುವುದಿಲ್ಲ. ಶಾಂತಿಸಾಗರದ ನೀರು ಕೆಸರಾಗಿರುವುದರಿಂದ ಕುಡಿಯಲು ಯೋಗ್ಯವಿಲ್ಲ ಎನ್ನುವುದನ್ನು ಗಮನಿಸಿ ವಿ.ವಿ.ಸಾಗರದಲ್ಲಿ ಅರವತ್ತು ಕೋಟಿ ರೂ.ವೆಚ್ಚದಲ್ಲಿ ಫಿಲ್ಟರ್ ಅಳವಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹೇಶಣ್ಣ, ಆರ್.ನುಲೇನೂರು ಶೇಖರಪ್ಪ, ಬಸವರಾಜಪ್ಪ, ರಾಜಪ್ಪ, ಗ್ರಾಮದ ಹಿರಿಯರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment