ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಹೊಳಲ್ಕೆರೆ : ರೈತರ ಅಡಿಕೆ ತೋಟಗಳನ್ನು ಉಳಿಸುವುದಕ್ಕಾಗಿ ಕ್ಷೇತ್ರದ 493 ಹಳ್ಳಿಗಳಲ್ಲಿ ಕೆರೆ ಕಟ್ಟೆ ಚೆಕ್ಡ್ಯಾಂಗಳನ್ನು ನಿರ್ಮಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕೆರೆ ಕೋಡಿ ಬಿದ್ದಿರುವುದರಿಂದ ಭಾನುವಾರ ಬಾಗಿನ ಅರ್ಪಿಸಿ ಮಾತನಾಡಿದರು.
ಹತ್ತು ಲಕ್ಷ ರೂ.ಗಳನ್ನು ಕೊಟ್ಟಿದ್ದೇನೆ. ಹಂತ ಹಂತವಾಗಿ ಇನ್ನು ಅನುದಾನ ನೀಡುತ್ತೇನೆ. ಕ್ಷೇತ್ರಾದ್ಯಂತ ಮನೆ ಮನೆಗೆ ಬಿಸ್ಲರಿಗಿಂತ ಶುದ್ದವಾದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿ ವಿಲಾಸ ಸಾಗರದಿಂದ ನೀರು ತರಲಾಗುವುದು. ಮೂವತ್ತು ವರ್ಷಗಳಿಂದಲೂ ರಾಜಕಾರಣ ಮಾಡುತ್ತಿದ್ದೇನೆ. ಯಾರಿಂದಲೂ ಏನನ್ನು ಹೇಳಿಸಿಕೊಳ್ಳದೆ ಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದರು.
ಮಲ್ಲಾಡಿಹಳ್ಳಿ ಸಮೀಪ ಭದ್ರವಾದ ಬ್ರಿಡ್ಜ್ ಕಟ್ಟಿಸಿದ್ದೇನೆ. ಕ್ಷೇತ್ರದ ಜನ ಎಲ್ಲರೂ ಸಂತೋಷವಾಗಿರಬೇಕೆಂಬುದು ನನ್ನ ಉದ್ದೇಶ. ಭದ್ರಾ ಪ್ರಾಜೆಕ್ಟ್ ನೀರನ್ನು ಹಿರಿಯೂರಿನ ವಾಣಿವಿಲಾಸಸಾಗರಕ್ಕೆ ಹರಿಸುತ್ತಿರುವುದರಿಂದ ಎಂದಿಗೂ ಅಲ್ಲಿ ನೀರು ಖಾಲಿಯಾಗುವುದಿಲ್ಲ. ಶಾಂತಿಸಾಗರದ ನೀರು ಕೆಸರಾಗಿರುವುದರಿಂದ ಕುಡಿಯಲು ಯೋಗ್ಯವಿಲ್ಲ ಎನ್ನುವುದನ್ನು ಗಮನಿಸಿ ವಿ.ವಿ.ಸಾಗರದಲ್ಲಿ ಅರವತ್ತು ಕೋಟಿ ರೂ.ವೆಚ್ಚದಲ್ಲಿ ಫಿಲ್ಟರ್ ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹೇಶಣ್ಣ, ಆರ್.ನುಲೇನೂರು ಶೇಖರಪ್ಪ, ಬಸವರಾಜಪ್ಪ, ರಾಜಪ್ಪ, ಗ್ರಾಮದ ಹಿರಿಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸುತ್ತಾರೆ.…