ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಯಚೂರಿನ ಪಿಎಸ್ಐ ಪರಶುರಾಮ್ ಇತ್ತಿಚೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಸಕ ಹಾಗೂ ಅವರ ಮಗ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಅದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪರಶುರಾಮ್ ಪತ್ನಿ ಆರೋಪ ಮಾಡಿದ್ದಾರೆ. ಪರಶುರಾಮ್ ಆತ್ಮಹತ್ಯೆಯ ಬಳಿಕ, ತಮ್ಮ ಹೆಸರು ಕೇಳಿದ ಬೆನ್ನಲ್ಲೇ, ಎಫ್ಐಆರ್ ದಾಖಲಾದ ಬೆನ್ನಲ್ಲೇ ಶಾಸಕ ಚೆನ್ನಾರೆಡ್ಡಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಬಳಿಕ ಮಾತನಾಡಿರುವ ಶಾಸಕ ಚನ್ನಾರೆಡ್ಡಿ ಪಾಟೀಲ, ನನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ನಾನು ಯಾವ ಪೊಲೀಸಗ ಬಳಿಯೂ ದುಡ್ಡು ಕೇಳಿಲ್ಲ. ದುಡ್ಡಿನ ಬಗ್ಗೆ ಮಾತು ಕೂಡ ಆಡಿಲ್ಲ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಮಾತನಾಡಿದ್ದೇನೆ ಅಷ್ಟೆ. ಬೇರೆ ಯಾವ ವಿಷಯವನ್ನು ನಾನು ಮಾತನಾಡಿಲ್ಕ
ಪ್ರಕರಣವನ್ನು ನಮ್ಮ ಸರ್ಕಾರ ಸಿಐಎಇಗೆ ವಹಿಸಿದೆ. ತನಿಖಾ ವರದಿ ಬಂದ ಮೇಲೆ ನಾನು ಸೇರಿ ಸತ್ಯಾಂಶ ತಿಳಿಯುತ್ತದೆ. ಎಫ್ಐಆರ್ ದಾಖಲು ಮಾಡುವುದು ಪೊಲೀಸರಿಗೆ ಬಿಟ್ಟಿದ್ದು. ಆ ವಿಚಾರದಲ್ಲಿ ನಾನು ಭಾಗಿಯಾಗಿಲ್ಲ. ಆ ಕುರಿತು ಯಾರ ಜೊತೆಗೂ ಮಾತನಾಡಿಲ್ಲ. ಇದೊಂದು ಷಡ್ಯಂತ್ರ. ತಂದೆ-ಮಗನನ್ನು ಸಿಕ್ಕಿ ಹಾಕಿಸಬೇಕೆಂದು ಮಾಡಿರುವ ಹುನ್ನಾರ. ಸಿಐಡಿ ವರದಿ ಬಂದ ಮೇಲೆ ಅದು ಷಡ್ಯಂತ್ರವೋ, ಅಲ್ಲವೋ ಎಂಬುದು ಹೊರಗೆ ಬರುತ್ತದೆ. ಕಾನೂನಿಗೆ ನಾನು ತಲೆ ಬಾಗುತ್ತೇನೆ. ಸಿಐಡಿ ಅವರು ಕರೆ ಮಾಡಿದ ತಕ್ಷಣ ನಾನು ಹೋಗಿ ವಿಚಾರಣೆಗೆ ಸಹಕಾರ ಕೊಡುತ್ತೇನೆ. ಸಿಎಂ ಅವರು ನಮ್ಮ ನಾಯಕ. ಪಕ್ಷದ ಸಭೆಗೆ ಬರಲು ಹೇಳಿದ್ದರು, ಅದಕ್ಕೆ ಹೋಗಿದ್ದೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್