ಮೈಸೂರು: ಸಿಎಂ ಹುದ್ದೆ ಬದಲಾವಣೆಯ ಗಾಳಿ ಬೀಸುವಾಗಲೇ ಆಕಾಂಕ್ಷಿಗಳ ಸಂಖ್ಯೆಯು ಇದ್ದೇ ಇರುತ್ತೆ. ಅದರಲ್ಲೂ ಮೊದಲ ಸ್ಥಾನದಲ್ಲಿ ಡಿಕೆ ಶಿವಕುಮಾರ್ ಅವರು ಇದ್ದಾರೆ. ಅದರಲ್ಲೂ ಈ ಅವಧಿಯಲ್ಲಿಯೇ ಸಿಎಂ ಆಸೆಯನ್ನ ಅನುಭವಿಸಿ ಬಿಡಬೇಕೆಂಬ ಕಾತುರ ಅವರಲ್ಲಿದೆ. ಇದರ ನಡುವೆ ಸತೀಶ್ ಜಾರಕಿಹೊಳಿ ಕೂಡ ಸಿಎಂ ಆಗಬೇಕು ಅಂತ ಹಲವರು ಲಾಭಿ ನಡೆಸಿದ್ದರು. ಆದ್ರೆ ಈಗ ಅವರೇ ಸಿಎಂ ಸ್ಥಾನದ ರೇಸ್ ನಿಂದ ಹಿಂದೆ ಸರಿದಿದ್ದಾರೆ.
ನಾನು ಸಿಎಂ ಸ್ಥಾನದ ರೇಸ್ ನಿಂದ ಹಿಂದೆ ಸರಿದಿದ್ದೇನೆ ಎಂದು ಮೈಸೂರಿನಲ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ನೀವೂ ರೈಟ್ ಪರ್ಸನ್ ಗೆ ಈ ಪ್ರಶ್ನೆ ಕೇಳಿ ರೈಟ್ ಉತ್ತರ ಸಿಗುತ್ತೆ. ನಾನು ಬಹಳ ಹಿಂದೆಯೇ ರೇಸ್ ನಿಂದ ಹಿಂದೆ ಸರಿದಿದ್ದೇನೆ. ಸಚಿವ ಸತೀಶ್ ಜಾರಕಿಹೊಳಿ ಈ ಹಿಂದೆ ಕೂಡ ಈ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಮುಂದಿನ ಅವಧಿಯಲ್ಲಿ ನಾನು ಕೂಡ ಸಿಎಂ ಸ್ಥಾನಕ್ಕೇರಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ , ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಬೇಕೆಂದು ರಾಜ್ಯ ಹಾಗೂ ಹೈಕಮ್ಯಾಂಡ್ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದರು. ಸತೀಶ್ ಜಾರಕಿಹೊಳಿ ಸಿಎಂ ಆಗಲು ಮಾಜಿ ಸಚಿವ ಕೆ.ಎನ್.ರಾಜಣ್ಣ ಬೆಂಬಲಿಸುತ್ತಿದ್ದರು.
ದಲಿತ ಸಿಎಂ ಕೂಗು ಕೇಳುತ್ತೆ . ನಾವು ಡಿನ್ನರ್ ಸಭೆಯಲ್ಲಿ ಏನು ಚರ್ಚೆ ನಡೆಸಿಲ್ಲ . ಸಿಎಂ ಡಿನ್ನರ್ ಗೆ ಕರೆದ್ರು ನಾವು ಹೋಗಿದ್ದೇವು ಅಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದ್ದಕ್ಕಿದ್ದ ಹಾಗೇ ಸತೀಶ್ ಜಾರಕಿಹೊಳಿ ಅವರು ಸಿಎಂ ಸ್ಥಾನದಿಂದ ಹಿಂದೆ ಸರಿದದ್ದು ಆಶ್ಚರ್ಯ ಉಂಟು ಮಾಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










