Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ,(ಮಾ.14) : ಚುನಾವಣೆ ಸಂದರ್ಭದಲ್ಲಿ ಎಲ್ಲಾರೂ ಭರವಸೆ ನೀಡುತ್ತಾರೆ. ಆದರೆ ನಾನು ಸುಳ್ಳು ಭರವಸೆ ನೀಡಲ್ಲ ಜನಸೇವೆ ಜೊತೆಗೆ  ನುಡಿದಂತೆ ನಾನು ನಡೆಯುವ ಮೂಲಕ ಅಭಿವೃದ್ಧಿ ಕಾರ್ಯವನ್ನು ಮಾಡಿದ್ದೇನೆ. ಐದು ವರ್ಷಗಳ ಕಾಲ ಜನರ ಪ್ರಮಾಣಿಕವಾಗಿ ನೂರಾರು  ಕೋಟಿ ಹಣ ವನ್ನು ತಂದು ಚಿತ್ರದುರ್ಗದ ಸಮಗ್ರ  ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.

ಇಂದು ನಗರದ ಕಾಮನಬಾವಿ ಬಡಾವಣೆ ಮತ್ತು ಆಜಾದ್ ನಗರದ ನಿವಾಸಿಗಳಿಗೆ ಸ್ಲಂ ಬೋರ್ಡ್ ವತಿಯಿಂದ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ನಗರದಲ್ಲಿ  ಸುಮಾರು 30 ರಿಂದ 40 ವರ್ಷ ಗಳಿಂದ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಹಕ್ಕುಪತ್ರ ಖಾತೆ ಆಗಿರಲಿಲ್ಲ.ಅಂತಹ ನಗರದ ಎಲ್ಲಾ ಕೊಳಚೆ ಪ್ರದೇಶಗಳನ್ನು ಸ್ಲಂ ಬೋರ್ಡ ನಿಂದ ಘೋಷಣೆ ಮಾಡಿದ್ದೇವೆ.ಎಸ್ಸಿ ಎಸ್ಟಿ 2 ಸಾವಿರ  ಮತ್ತು ಇತರೆ ಜನಾಂಗದವರಿಗೆ 3 ಸಾವಿರ ಸ್ಲಂ ಬೋರ್ಡ್‍ಗೆ ಹಣ ಕಟ್ಟಬೇಕು ಎಂದರು.

ನಾನು ಎಂದು ಸಹ ಅಭಿವೃದ್ಧಿ ವಿಚಾರದಲ್ಲಿ  ರಾಜಕಾರಣ ಮಾಡಲ್ಲ. ನನ್ನ ಕ್ಷೇತ್ರಕ್ಕೆ  2630 ಮನೆಗಳನ್ನು ತಂದು ಎಲ್ಲರಿಗೂ ಮನೆ ನೀಡುವ ಕೆಲಸ ಮಾಡಿದ್ದೇನೆ.  ಕೇಂದ್ರ ಸರ್ಕಾರದಿಂದ 430 ಮನೆ ಸೇರಿ  ಒಟ್ಟು 3060 ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದ ಶಾಸಕರು ಜಲಜೀವನ್ ಮಿಷನ್ ಮೂಲಕ 560 ಕೋಟಿ ವೆಚ್ಚದಲ್ಲಿ 183 ಹಳ್ಳಿಗಳಿಗೆ ವಿ.ವಿ.ಸಾಗರದದಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಇದರ ಜೊತೆಗೆ ಎಲ್ಲಾ ಹಳ್ಳಿಗಳಲ್ಲಿ ಸಿ.ಸಿ.ರಸ್ತೆಗಳನ್ನು ಮಾಡಿ ಮಣ್ಣು ಮುಕ್ತ ರಸ್ತೆಗಳಾಗಿಸಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ಪಕ್ಷ  ಚುನಾವಣೆ ಸಮಯದಲ್ಲಿ  ಕೊಟ್ಟ ಮಾತಿನಂತೆ ಜನತೆಗೆ ಎಲ್ಲಾ ಸೌಲಭ್ಯಗಳನ್ನು ನೀಡಿದ್ದು, ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು.  ಕಾಮನಬಾವಿ ಬಡಾವಣೆಯಲ್ಲಿ 450 ಮತ್ತು ಆಜಾದ್ ನಗರದಲ್ಲಿ 135 ಜನ    ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ಇಂದು ನೀಡಿದ್ದೇನೆ. ಕಳೆದ ಹಲವು ವರ್ಷಗಳಿಂದ ನಗರದ ಬಹುತೇಕ ಜನರು ತಮ್ಮ ಮನೆಗಳಿಗೆ ಹಕ್ಕುಪತ್ರ ಇಲ್ಲದೆ ಪರಿತಪಿಸುತ್ತಿದ್ದು, ಪ್ರತಿ ಚುನಾವಣೆಯಲ್ಲೂ ಬೇಡಿಕೆ ಈಡುತ್ತಿದ್ದರು. ಇದನ್ನು ಬಿಜೆಪಿ ಮನಗಂಡು ಚುನಾವಣೆಯಲ್ಲಿ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿತ್ತು, ಅದರಂತೆ ಇಂದು ಫಲಾನುಭವಿಗಳಿಗೆ ಹಕ್ಕುಪತ್ರ ನೀಡುತ್ತಿದೆ. ಇದರಲ್ಲಿ ಯಾರದಾದರೂ ಹೆಸರು ಬಿಟ್ಟಿದ್ದರೆ ಪುನಃ ಸೇರಿಸಬಹುದು ಎಂದರು.

ಬುದ್ದ ನಗರ, ಅಗಳು, ಜೆ.ಜೆ.ಹಟ್ಟಿ, ಹಿಮ್ಮತ್ ನಗರ, ಚೇಳಗುಡ್ಡ, ಹಳ್ಳದ ಏರಿಯಾ, ಜಟ್‍ಪಟ್ ನಗರ, ಜೋಗಿಮಟ್ಟಿ ರೋಡ್ ಸೇರಿ ಹಲವು ಕಡೆಗಳಲ್ಲಿ ಸೇರಿ 12 ಸಾವಿರಕ್ಕಿಂತ ಹೆಚ್ಚು  ಫಲಾನುಭವಿಗಳಿಗೆ ಹಕ್ಕು ಪತ್ರವನ್ನು  ಹಂತ ಹಂತವಾಗಿ ನೀಡಲಾಗುತ್ತಿದ್ದು ಇದರಿಂದ ಸುಮಾರು 45 ರಿಂದ 50 ಸಾವಿರ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ತಿಪ್ಪಾರೆಡ್ಡಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ, ನಗರಸಭೆ ಸದಸ್ಯರಾದ ಮಂಜುಳ ವೆಂಕಟೇಶ್,ಶ್ವೇತಾ  ವೀರೇಶ್, ಗೀತಾ,ಮಂಜುನಾಥ್ ಮುಖಂಡರಾದ  ಮಹೇಶ್, ವೆಂಕಟೇಶ್, ರಾಮಚಂದ್ರ ಚಾರ್, ಮಂಜುನಾಥ್ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!