Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋಲ್ ಮಾಲ್ ಬಗ್ಗೆ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ : ವಿನಯ್ ಕುಲಕರ್ಣಿ

---Advertisement---

 

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ನಿಗಮ, ಮೈಸೂರು ಮೂಡಾದ ಹಗರಣಗಳು ಸಾಕಷ್ಟು ಸದ್ದು ಮಾಡುತ್ತಿರುವಾಗಲೇ ರಾಜ್ಯದಲ್ಲಿ ಮತ್ತಷ್ಟು ಹಗರಣಗಳ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಮಾತನಾಡಿದ್ದಾರೆ. ಪಕ್ಷದ ಮುಖಂಡರಿಗೂ ಈ ಬಗ್ಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ, ನಮ್ಮ ಬೋರ್ಡ್ ನಲ್ಲಿ ದುರಾಡಳಿತ ನಡೆದಿದೆ. ಆ ಬೋರ್ಡ್ ಗೆ ನಾನು ಹೆಡ್. ಅಲ್ಲಿನ ವ್ಯವಸ್ಥೆ ಸರಿ ಇಲ್ಲ. ಲಾಸ್ಟ್ ಟೈಂ ಮಂತ್ರಿಗಳು ಸಹ ಹೇಳಿದ್ದರು. ಇದನ್ನು ಸಿಐಡಿಗೆ ಕೊಡಬೇಕು ಅಂತ. ಆದರೆ ಪರಿಶೀಲನೆ ನಡೆಯಲಾರದಂತ ದುರಾಡಳಿತ ನಡೆದಿದೆ. ಮೊನ್ನೆ ನಾವೂ ವಾಲ್ಮೀಕಿ ಬೋರ್ಡ್ ವ್ಯವಸ್ಥೆ ನೋಡಿದ್ದೇವೆ‌. ಅದಕ್ಕಿಂತಲೂ ಕೆಟ್ಟ ವ್ಯವಸ್ಥೆ ಇಲ್ಲಿ ಆಗುವುದು ಬೇಡ. ಅದಕ್ಕಾಗಿ ಪತ್ರಗಳನ್ನು ಕೊಟ್ಟಿದ್ದೇನೆ. ಆ ವಿಚಾರ ಪ್ರಸ್ತಾಪ ಮಾಡುವ ವಿಚಾರ ಬಂದಾಗ ಮಾತನಾಡುತ್ತೇನೆ. ಅಲ್ಲಿ ಹಲವಾರು ದುರಾಡಳಿತ ನಡೆದಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಬಂದಂತಹ ಸಮಯದಲ್ಲಿ ಈ ವಿಚಾರಗ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

ಇದೇ ವೇಳೆ ದೆಹಲಿಗೆ ಹೋಗಿದ್ದರ ಬಗ್ಗೆಯೂ ಮಾತನಾಡಿ, ದೆಹಲಿಗೆ ಹೋಗಿದ್ದು ನಿಜ. ಅಸಮಾಧಾನವೇನು ಇಲ್ಲ. ಯಾರ ಮುಂದೆಯೂ ಅಸಮಾಧಾನವನ್ನು ವ್ಯಕ್ತಪಡಿಸಿಲ್ಲ. ಗೌರವ ಇಲ್ಲದ ಕಡೆ ನಾನ್ಯಾಕೆ ಹೋಗಲಿ ಎಂದಿದ್ದಾರೆ. ಜೊತೆಗರ ದುರಾಡಳಿತದ ಬಗ್ಗೆ ಮಾತು ಮುಂದುವರೆಸಿ, ನಮ್ಮ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ. ಹತ್ತು ಹದಿನೈದು ಕಂಪನಿಗಳಿದಾವೆ. ಅದರಲಗಲಿ ಯಾವೆಲ್ಲಾ ಗೋಲ್ ಮಾಲ್ ಆಗಿದೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.. ತನಿಖೆ ನಡೆಯಲಿ. ನಾನು ಈ ಸಂಬಂಧ ಪತ್ರ ಕಿಟ್ಟು ಎರಡೂವರೆ ತಿಂಗಳಾಯಿತು. ಮುಖ್ಯಮಂತ್ರಿಗೂ ವಿಚಾರ ತಿಳಿಸಿದ್ದೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment